ಕೋಲಾರ: ರಾಷ್ಟ್ರಕವಿ ಕುವೆಂಪು ಪುತ್ಥಳಿಯನ್ನು ನಗರದ ಅಂತರಗಂಗೆ ರಸ್ತೆಯ ಕುವೆಂಪು ಉದ್ಯಾನದಲ್ಲಿ ಕಿಡಿಗೇಡಿಗಳ ವಿರೂಪಗೊಳಿಸಿದ್ದು ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ : ಒಳಮೀಸಲಾತಿ ತಕ್ಷಣವೇ ಜಾರಿ ಮಾಡಿ ಮುಖ್ಯಮಂತ್ರಿಗೆ ದೇವನೂರು ಮಹದೇವ ಬಹಿರಂಗ ಪತ್ರ
ರಾಷ್ಟ್ರಕವಿಗೆ ಅವಮಾನ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ವಹಿಸಬೇಕೆಂದು ಕನ್ನಡ ಹೋರಾಟಗಾರರು ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಹಾಗೂ ವರನಟ ಡಾ.ರಾಜ್ಕುಮಾರ ಅವರ ಪುತ್ಥಳಿ ಯಾವುದೇ ನಿರ್ವಹಣೆ ಇಲ್ಲದೆ ಅನಾಥವಾಗಿದ್ದು ರಕ್ಷಿಸಬೇಕು ಹಾಗೂ ಉದ್ಯಾನಕ್ಕೆ ಮೂಲಸೌಲಭ್ಯ ಕಲ್ಪಿಸಬೇಕೆಂದು ಹೋರಾಟಗಾರರು ನಗರಸಭೆಗೆ ಒತ್ತಾಯಿಸಿದ್ದಾರೆ. ಈ ಪುತ್ಥಳಿಗೆ ಕೇಕ್ ಬಳಿದು ವಿಕೃತಿ ಮೆರೆದಿರುವುದು ತಿಳಿದುಬಂದಿದೆ.
ಇದನ್ನೂ ನೋಡಿ : ಪುಷ್ಪಗಳಲ್ಲಿ ಅರಳಿದ ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ’Janashakthi Media
