ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರರಾಗಿ ಶಾಸಕ ಪೊನ್ನಣ್ಣ ನೇಮಕ

ಬೆಂಗಳೂರು: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎ.ಎಸ್‌.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಸಂಪುಟ ದರ್ಜೆ ಸಚಿವರ ಸ್ಥಾನಮಾನ ಹೊಂದಿರುವ ಈ ಹುದ್ದೆಗೆ ಪೊನ್ನಣ್ಣ ಅವರ ನೇಮಕವನ್ನು ಈ ಮೊದಲೇ ಘೋಷಿಷಲಾಗಿತ್ತು. ಆದರೆ, ನೇಮಕಾತಿಗೆ ಕಾನೂನು ತಿದ್ದುಪಡಿ ಆಗಬೇಕಿದ್ದ ಕಾರಣ ಅವರು ಅಧಿಕೃತವಾಗಿ ಅಧಿಕಾರ  ವಹಿಸಿಕೊಂಡಿರಲಿಲ್ಲ.

ಹಿರಿಯ ವಕೀಲ ಮತ್ತು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರೂ ಆಗಿದ್ದ ದಿವಗಂತ ಎ.ಕೆ.ಸುಬ್ಬಯ್ಯ ಅವರ ಪುತ್ರರಾದ ಪೊನ್ನಣ್ಣ ಈ ಹಿಂದೆ ಸಿದ್ದರಾಮಯ್ಯ ಮತ್ತು ಹೆಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹೈಕೋರ್ಟ್‌ನ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ಕಾರ್ಯ ನಿರ್ವಹಿಸಿದ್ದರು. ನಂತರ ಹೈಕೋರ್ಟ್‌ನ ಹಿರಿಯ ವಕೀಲರಾಗಿ ನಿಯೋಜಿತರಾಗಿದ್ದರು.

Donate Janashakthi Media

Leave a Reply

Your email address will not be published. Required fields are marked *