ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಸಿಗುವುದಿಲ್ಲ: ಹೊಸ ಕಾನೂನು

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾದರಿ ಮಸೂದೆಯೊಂದನ್ನು ಹಿಮಾಚಲ ಪ್ರದೇಶದ ಆಡಳಿತಾರೂಢ ಅಲ್ಲಿನ ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಅದೇನೆಂದರೆ ಒಂದು ಪಕ್ಷದಿಂದ ಗೆದ್ದು ಮತ್ತೊಂದು ಪಕ್ಷಕ್ಕೆ ಜಿಗಿಯುವ ಶಾಸಕರು ಇನ್ನು ಮುಂದೆ ಪಿಂಚಣಿಯನ್ನು ಪಡೆಯುವುದಿಲ್ಲ. ಹೀಗಾಗಿ  ಪಕ್ಷಗಳಿಗೆ ಪಕ್ಷಾಂತರ ಮಾಡುವ ಹಿಮಾಚಲ ಪ್ರದೇಶದ ಶಾಸಕರಿಗೆ ಪಿಂಚಣಿ ಸಿಗುವುದಿಲ್ಲ.  ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡ ಶಾಸಕರಿಗೆ ಇದು ಅನ್ವಯಿಸುತ್ತದೆ ಎಂದು ಹೊಸ ಕಾನೂನು ಹೇಳುತ್ತದೆ.

ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಹೋದವರು ಹಾಗೂ ಇನ್ನು ಮುಂದೆ ಹೋಗುವವರಿಗೆ ಪಾಠ ಕಲಿಸಲೆಂದೇ ಅಲ್ಲಿನ ಕಾಂಗ್ರೆಸ್‌ ಹೊಸ ಮಸೂದೆಯನ್ನು ಜಾರಿ ಮಾಡಿದೆ. ಹಿಮಾಚಲ ಪ್ರದೇಶ ಸರ್ಕಾರವು ಅಭೂತಪೂರ್ವ ಕ್ರಮವೊಂದರಲ್ಲಿ ಪಕ್ಷಾಂತರಿಗಳಿಗೆ ಪಿಂಚಣಿ ನಿಲ್ಲಿಸಲು ಹೊಸ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಿತು.

ಪಕ್ಷಾಂತರ ಮಾಡುವ ಶಾಸಕರ ಪಿಂಚಣಿಯನ್ನು ನಿಲ್ಲಿಸುವ ಮಸೂದೆಯನ್ನು ನಿನ್ನೆ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.  ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ವಿಧಾನಸಭೆ (ಸದಸ್ಯರ ಭತ್ಯೆ ಮತ್ತು ಪಿಂಚಣಿ) ತಿದ್ದುಪಡಿ ಮಸೂದೆ 2024 ಎಂಬ ಮಸೂದೆಯನ್ನು ಮಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್ ಪ್ರಕರಣ : ಬಿ.ಜಿ. ರಾಮಕೃಷ್ಣಗೆ ನೀಡಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ

“ಸಂವಿಧಾನದ 10 ನೇ ಶೆಡ್ಯೂಲ್ ಅಡಿಯಲ್ಲಿ ಯಾವುದೇ ಸಮಯದಲ್ಲಿ ಅನರ್ಹಗೊಂಡ ಶಾಸಕರು ಕಾಯ್ದೆಯಡಿ ಪಿಂಚಣಿ ಪಡೆಯಲು ಅರ್ಹನಾಗಿರುವುದಿಲ್ಲ” ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್ಪಾಲ್, ಚೇತನಾ ಶರ್ಮಾ ಮತ್ತು ದೇವಿಂದರ್ ಕುಮಾರ್ ಎಂಬ ಆರು ಕಾಂಗ್ರೆಸ್ ಶಾಸಕರನ್ನು ಈ ವರ್ಷದ ಫೆಬ್ರವರಿಯಲ್ಲಿ ಪಕ್ಷಾಂತರ ವಿರೋಧಿ ಕಾಯ್ದೆಯಡಿ ಅನರ್ಹಗೊಳಿಸಲಾಗಿತ್ತು.

ಸುಧೀರ್ ಶರ್ಮಾ ಮತ್ತು ಇಂದರ್ ದತ್ ಲಖನ್ಪಾಲ್ ನಂತರ ಉಪಚುನಾವಣೆಯಲ್ಲಿ ಗೆದ್ದ ನಂತರ ವಿಧಾಸಭೆಗೆ ಮರಳಿದ್ದರು. ಇತರ ನಾಲ್ವರು ಮರುಚುನಾವಣೆಯ ಪ್ರಯತ್ನದಲ್ಲಿ ಸೋತಿದ್ದರು.  ಈ  ಆರು ಕಾಂಗ್ರೆಸ್ ಶಾಸಕರು ಫೆಬ್ರವರಿಯಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಪರವಾಗಿ ಮತ ಚಲಾಯಿಸಿದ್ದರು.

ಇದನ್ನೂ ನೋಡಿ: ಬಿಜೆಪಿಯವರು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ – ಬಿ.ಕೆ. ಹರಿಪ್ರಸಾದ್Janashakthi Media

Donate Janashakthi Media

Leave a Reply

Your email address will not be published. Required fields are marked *