ಮೈಸೂರು: ಮೋದಿ ಸರ್ಕಾರಕ್ಕೆ 10 ಕ್ಕೆ ಸೊನ್ನೆ ಅಂಕ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ 11 ವರ್ಷ ಪೂರೈಸಿರಿವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಹೇಳಿದ್ದಾರೆ.
ಮಾಧ್ಯಮ ಪ್ರಚಾರದಿಂದಾಗಿ ಮೋದಿ 11 ವರ್ಷಗಳನ್ನು ಪೂರೈಸಿದ್ದಾರೆ. ಶೂನ್ಯ ಅಂಕಗಳು. ಗುಜರಾತ್ ಸಿಎಂ ಆಗಿದ್ದಾಗ, ಕೇಂದ್ರ ತೆರಿಗೆ ವಿಕೇಂದ್ರೀಕರಣದಲ್ಲಿ ರಾಜ್ಯಗಳಿಗೆ 50% ಪಾಲು ಇರಬೇಕು ಎಂದು ಹೇಳಿದ್ದರು, ಆದರೆ ಅವರು ಪ್ರಧಾನಿಯಾದಾಗ ಏನು ಮಾಡಿದರು?… ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ. ಆದರೆ ನಾವು ಬಿಜೆಪಿಯನ್ನು ಕೇಳಿದಾಗ, ನಾವು ಅಪಪ್ರಚಾರದಲ್ಲಿ ತೊಡಗಿದ್ದೇವೆ ಎಂದು ಅವರು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮಹೇಶ್ ಜೋಶಿ ರನ್ನು ಅಮಾನತುಗೊಳಿಸಿ: ಕನ್ನಡ ನಾಡು – ನುಡಿ ಜಾಗೃತಿ ಸಮಿತಿ
ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. 11 ವರ್ಷ ತುಂಬಿಸಿದ್ದಾರೆ ಅಷ್ಟೇ. ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ ಎಂದರು.
ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ನೋಡಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ | ವಿಶ್ಲೇಷಣೆ – ಅಹಮದ್ ಹಗರೆ Janashakthi Media