ತಮ್ಮ ಶ್ರೀಮಂತ ಸ್ನೇಹಿತರಿಗಾಗಿ ಮಾತ್ರ ಕೆಲಸ ಮಾಡುತ್ತಿರುವ ಮೋದಿ – ಪ್ರಿಯಾಂಕಾ ಗಾಂಧಿ ಆರೋಪ

ಜೈಪುರ: ದೇಶದ ಬಡವರ ಹಣ ವೆಚ್ಚ ಮಾಡಿ ಮೋದಿ ತಂಡವು ತನ್ನ “ಶ್ರೀಮಂತ ಸ್ನೇಹಿತರಿಗಾಗಿ”  ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ  ಆರೋಪಿಸಿದ್ದಾರೆ. ಪ್ರಿಯಾಂಕಾ ಗಾಂಧಿ

ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದ ದೌಸಾ ಜಿಲ್ಲೆಯ ಸಿಕ್ರೈನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ತನ್ನ ಕೆಲವೇ ಕೆಲವು ಸ್ನೇಹಿತರ ಹಿತಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಏಕೈಕ ಗುರಿ ಅಧಿಕಾರದಲ್ಲಿ ಉಳಿಯುವುದಷ್ಟೇ ಹೊರತು ಜನರ ಕಲ್ಯಾಣವಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯವರು ರಾಜಸ್ಥಾನದಲ್ಲಿ ಅಧಿಕಾರದಲ್ಲಿದ್ದ ಸಮಯದಲ್ಲಿ ಜನರ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಎಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ಮುಖ್ಯ ಉದ್ದೇಶ ಜನರ ಕಲ್ಯಾಣವಲ್ಲ, ಅಧಿಕಾರದಲ್ಲಿರುವುದಷ್ಟೇ ಅವರ ಪರಮ ಗುರಿ. ಬಡವರ ಜೇಬಿನಿಂದ ಹಣವನ್ನು ಕದ್ದು ಅದನ್ನು ದೊಡ್ಡ ದೊಡ್ಡ ಉದ್ಯಮಿಗಳ ಕಿಸೆಗೆ ಹಾಕುವುದು ಬಿಜೆಪಿಯವರ ದೊಡ್ಡ ನೀತಿಯಾಗಿದೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕದಲ್ಲಿ ಮತ್ತಷ್ಟು ಕುಸಿತ ಜನರ ಬಗ್ಗೆ ಮೋದಿ ಸರ್ಕಾರದ ಉದಾಸೀನತೆ, ನಿರಾಸಕ್ತಿಯ ಪರಿಣಾಮ- ಎಐಕೆಎಸ್

ಸೇವೆ ಮತ್ತು ಅನುಕಂಪದಿಂದ ನಾವು ರಾಜಕೀಯದಲ್ಲಿ ಸಾರ್ವಜನಿಕರ ಕಲ್ಯಾಣ ಸಾಧಿಸಲು ಸಾಧ್ಯ. ಆದರೆ, ಬಿಜೆಪಿಯವರು ಅಭಿವೃದ್ಧಿಯ ಬಗ್ಗೆ ಮಾತನಾಡುವ ಬದಲು ಜಾತಿ ಹಾಗೂ ಧರ್ಮದ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ನಾಯಕ ಎನ್ನಿಸಿಕೊಂಡವನು ವರ್ತಮಾನ ಹಾಗೂ ಭವಿಷ್ಯತ್​ ಕಾಲದ ಬಗ್ಗೆ ಮಾತನಾಡುತ್ತಾನೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರು ಮತ್ತು ಪ್ರಧಾನಿ ಸಾಮಾನ್ಯ ಜನರ ಕಲ್ಯಾಣಕ್ಕಿಂತ ತಮ್ಮ “ಶ್ರೀಮಂತ ಕೈಗಾರಿಕೋದ್ಯಮಿ ಸ್ನೇಹಿತರಿಗೆ” ಆದ್ಯತೆ ನೀಡುತ್ತಿದ್ದಾರೆ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ. “ಅವರ ಗಮನವು ನಿಮ್ಮ ಯೋಗಕ್ಷೇಮದ ಮೇಲೆ ಅಲ್ಲ ಆದರೆ ಅವರ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ಅವರ ಸ್ವ-ಆಸಕ್ತಿಯನ್ನು ಹೆಚ್ಚಿಸುವಲ್ಲಿ. ಬಡವರಿಂದ ಸಂಪತ್ತನ್ನು ಹೊರತೆಗೆಯುವುದು ಮತ್ತು ಕೈಗಾರಿಕೋದ್ಯಮಿಗಳನ್ನು ಶ್ರೀಮಂತಗೊಳಿಸುವುದು ಅವರ ಏಕೈಕ ಕಾರ್ಯಸೂಚಿಯಾಗಿದೆ ಎಂದು ಅವರು ಹೇಳಿದರು.

ಮುಂಬರುವ  ಲೋಕಸಭೆ ಚುನಾವಣೆ ನವೆಂಬರ್ 25ರಂದು ರಾಜಸ್ಥಾನದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ವಿಡಿಯೋ ನೋಡಿ: ಬಿಜೆಪಿ-ಜೆಡಿಎಸ್​ ವಿರುದ್ಧ ಕಾಂಗ್ರೆಸ್​ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ Janashakthi Media

Donate Janashakthi Media

Leave a Reply

Your email address will not be published. Required fields are marked *