ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಕೊಲೆ ಪ್ರಕರಣ | ದಾರಾ ಸಿಂಗ್‌ ಬಿಡುಗಡೆಗಾಗಿ ನಡೆದ ಅಭಿಯಾನದಲ್ಲಿ ಒಡಿಶಾ ಸಿಎಂ

ಹೊಸದಿಲ್ಲಿ : ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. 1999ರಲ್ಲಿ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಹತ್ಯೆಗೈದ ಆರೋಪದಲ್ಲಿ ಶಿಕ್ಷೆಗೊಳಗಾದ ಭಜರಂಗದಳ ಕಾರ್ಯಕರ್ತ ದಾರಾ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಸುದರ್ಶನ್ ಟಿವಿಯ ಸಂಪಾದಕ ಸುರೇಶ್ ಚವ್ಹಾಂಕೆ ಅವರ ಜೊತೆಗೆ ಭಾಗಿಯಾಗಿದ್ದರು. ದಾರಾ 

ಈ ಕುರಿತು ದಿ ವೈರ್‌ ವರದಿ ಮಾಡಿದ್ದು, ಇಸ್ಲಾಮೋಫೋಬಿಯಾಕ್ಕೆ ಹೆಸರುವಾಸಿಯಾಗಿರುವ ಚವ್ಹಾಂಕೆ ದಾರಾ ಸಿಂಗ್‌ನನ್ನು ಬಿಡುಗಡೆ ಮಾಡುವಂತೆ ಅಭಿಯಾನವನ್ನು ನಡೆಸಿದ್ದಾರೆ. ಸೆಪ್ಟೆಂಬರ್ 2022ರಲ್ಲಿ, ಕಿಯೋಂಜಾರ್ ಜೈಲಿನಲ್ಲಿ ಸಿಂಗ್ ಅವರನ್ನು ಭೇಟಿ ಮಾಡಲು ಚವ್ಹಾಂಕೆಗೆ ಅನುಮತಿ ನಿರಾಕರಿಸಲಾಗಿದೆ, ಅದರ ನಂತರ ಸುದರ್ಶನ್ ಟಿವಿ ಸಂಪಾದಕ ಮತ್ತು ಮಾಝಿ ಸೇರಿದಂತೆ ಅವರ ಜೊತೆಗಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ವಿರುದ್ಧ ಧರಣಿ ನಡೆಸಿದ್ದರು.

1999ರ ಜನವರಿ 22ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿ ಜೊತೆ  ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆ ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು.

 

ಇದನ್ನು ಓದಿ : ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ,ತಪ್ಪಿತಸ್ಥರನ್ನು ಬಿಡುವುದಿಲ್ಲ; ಧರ್ಮೇಂದ್ರ ಪ್ರಧಾನ್

 

Dara Singh, campaign, Mohan Charan Mazi, Odisha's new chief minister, Islam, Bajrang Dal

2003ರಲ್ಲಿ ಖೋರ್ಧಾದ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಸಿಂಗ್‌ಗೆ ಮರಣದಂಡನೆ ವಿಧಿಸಿತ್ತು. ಇತರ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಒಡಿಶಾ ಹೈಕೋರ್ಟ್ ಸಿಂಗ್ ಅವರ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ಇಸ್ಲಾಮ್ ವಿರುದ್ಧ ದ್ವೇಷಕ್ಕಾಗಿ ಹೆಸರಾಗಿರುವ ಚಾವಂಕೆ ಸಿಂಗ್‌ನನ್ನು ಬಿಡುಗಡೆಗೊಳಿಸಲು ಅಭಿಯಾನದ ಮುಂಚೂಣಿಯಲ್ಲಿದ್ದಾರೆ. 2022 ಸೆಪ್ಟೆಂಬರ್‌ನಲ್ಲಿ ಕಿಯೊಂಝಾರ್ ಜೈಲಿನಲ್ಲಿ ಸಿಂಗ್‌ನನ್ನು ಭೇಟಿಯಾಗಲು ಚಾವಂಕೆಗೆ ಅನುಮತಿ ನಿರಾಕರಿಸಲಾಗಿತ್ತು. ಆತನ ಕುಟುಂಬ ಸದಸ್ಯರಿಗೆ ಮಾತ್ರ ಭೇಟಿಗೆ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಬಳಿಕ ಚಾವಂಕೆ ಮತ್ತು ಆಗ ಬಿಜೆಪಿಯ ಮುಖ್ಯ ಸಚೇತಕರಾಗಿದ್ದ ಮಾಝಿ ಸೇರಿದಂತೆ ಅವರ ಜೊತೆಯಲ್ಲಿದ್ದ ಬಿಜೆಪಿ ನಾಯಕರು ಜೈಲು ಅಧಿಕಾರಿಗಳ ಮೇಲೆ ಒತ್ತಡ ಹೇರಲು ಧರಣಿ ನಡೆಸಿದ್ದರು.

‘ಸಿಂಗ್‌ನನ್ನು ಬಿಡುಗಡೆಗೊಳಿಸಬೇಕು ಎನ್ನುವುದು ಕೇವಲ ಬೇಡಿಕೆಯಾಗಿದೆ. ಅಗತ್ಯವಾದರೆ ಸಿಂಗ್‌ನನ್ನು ಬೆಂಬಲಿಸಲು ನಾವು ಪಕ್ಷದಲ್ಲಿ ಚರ್ಚಿಸುತ್ತೇವೆ ‘ ಎಂದು ಮಾಝಿ ಸುದ್ದಿಗಾರರಿಗೆ ತಿಳಿಸಿದ್ದರು.

ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024

Donate Janashakthi Media

Leave a Reply

Your email address will not be published. Required fields are marked *