ಬಿರಿಯಾನಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚಿನ ಮಂದಿ ಆಸ್ಪತ್ರೆಗೆ ದಾಖಲು

ರಾಮನಗರ: ವಿವಾಹ ಸಮಾರಂಭದಲ್ಲಿ ಬಿರಿಯಾನಿ ಹಾಗೂ ಐಸ್​ ಕ್ರೀಂ ತಿಂದು ಅಸ್ವಸ್ತರಾಗಿದ್ದ  50ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ‌.

ಕಳೆದ ಭಾನುವಾರ  ಚನ್ನಪಟ್ಟಣದಲ್ಲಿ ನಡೆದಿದೆ.

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ‌ ಮಾಡಿರುವಂತಹ ಹೀನ‌ಕೃತ್ಯ ನಿಜಕ್ಕೂ ಖಂಡನೀಯ: ಕುಮಾರಬಂಗಾರಪ್ಪ

ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್ಪಾಡಾಗಿತ್ತು. ಊಟದ ನಂತರ ಐಸ್​ ಕ್ರೀಂ ಸೇವಿಸಿದವರಿಗೆ ಅರ್ಧ ಗಂಟೆಯ ಬಳಿಕ ವಾಂತಿ, ಭೇದಿ ಶುರುವಾಗಿದೆ. ಯಾರಬ್​ ನಗರ ಹಾಗೂ ಕೋಟೆ ನಿವಾಸಿಗಳಾದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ನೋಡಿ: ಸಂಯುಕ್ತ ಕಿಸಾನ್‌ ಮೋರ್ಚಾ ಅಖಿಲ ಭಾರತ ಪತ್ರಿಕಾಗೋಷ್ಠಿ-ಹುಬ್ಬಳ್ಳಿ SKM All India Press Meet Karnataka.

Donate Janashakthi Media

Leave a Reply

Your email address will not be published. Required fields are marked *