ನವದೆಹಲಿ: ಕೃಷಿಕರಿಗೆ ಭಾರತ ಹವಾಮಾನ ಇಲಾಖೆಯು “ದೇಶದಲ್ಲಿ ಈ ಬಾರಿ ವಾಡಿಕೆಗಿಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ” ಎಂಬ ಸಿಹಿ ಸುದ್ದಿ ಹೇಳಿದೆ.
ಭಾರತದಲ್ಲಿ ಈ ವರ್ಷ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಭಾರತ ಹವಾಮಾನ ಇಲಾಖೆ ದೀರ್ಘಾವಧಿಯ ಸರಾಸರಿಯ ಶೇ 105 ಕಾಲೋಚಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ, ಸೆಪ್ಟೆಂಬರ್ ಮಧ್ಯದ ವೇಳೆಗೆ ಹಿಂದೆ ಸರಿಯುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ತೆರಿಗೆಗೆ ತಾತ್ಕಾಲಿಕ ಬ್ರೇಕ್ – ಸೆನ್ಸೆಕ್ಸ್ 1,397 ಅಂಕಗಳ ಏರಿಕೆ
ಈ ವರ್ಷದ ಮುನ್ಸೂಚನೆಯು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.
4 ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ತಿಂಗಳಿಂದ ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ ಎಂದು ಹೇಳಿದೆ.
ಇದನ್ನೂ ನೋಡಿ: ಪಿಚ್ಚರ್ ಪಯಣ – 155 | ವಿಡಂಬನಾತ್ಮಕ ನಿರೂಪಣೆಯ ಫೆಮಿನಿಚಿ ಫಾತಿಮಾ ವಿಶ್ಲೇಷಣೆ : ಮ ಶ್ರೀ ಮುರಳಿ ಕೃಷ್ಣ