ಮುಖ್ಯಮಂತ್ರಿ ಕಾರ್ಯಾಲಯ ಅಧಿಕಾರಿಗಳ ಎಡವಟ್ಟು: ಮಾಜಿ ಸಿಎಂ ಲೆಟರ್‌ ಹೆಡ್‌ಲ್ಲಿ ಹಾಲಿ ಸಿಎಂ ಸಂದೇಶ ರವಾನೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳ ಎಡವಟ್ಟಿನಿಂದ ಪ್ರಮುಖ ವಿಚಾರವೊಂದಕ್ಕೆ ಸಂಬಂಧಿಸಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಅವರ ಲೆಟರ್‌ ಹೆಡ್‌ನಲ್ಲಿ ಸಂದೇಶದ ಕಳುಹಿಸಿದ ಪ್ರಮಾದ ನಡೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕೆಲವು  ವಿಷಯಗಳ ಪತ್ರ ವ್ಯವಹಾರಕ್ಕೆ ತಮ್ಮ ಹೆಸರಿನ ಲೆಟರ್ ಹೆಡ್ ಬಳಸಬೇಕು. ಇದರ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯ ಅಧಿಕಾರಿಗಳು ಗಮನ ಹರಿಸಬೇಕು, ಹೀಗೆ ಮಾಡಬೇಕಾದ ಅಧಿಕಾರಿಗಳೇ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಹೆಸರಿನ ಲೆಟರ್ ಹೆಡ್ ಬಳಸಿರುವುದು ಬೆಳಕಿಗೆ ಬಂದಿದೆ.

ರಾಜ್ಯದ ಸಂಸದರೊಂದಿಗೆ ಸಭೆ ನಡೆಸುವುದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಸಭೆಗೆ ಮಾಹಿತಿ ನೀಡುವ ಬಗ್ಗೆ ಸಂಸದರಿಗೆ ಅವರು ಪತ್ರ ಬರೆದಿದ್ದರು. ಅದು ಸಂಸದರಿಗೆ, ಸಂಬಂಧಿಸಿದ ಇತರರಿಗೆ ರವಾನೆಯಾಗಿತ್ತು. ರವಾನೆಯಾಗಿದ್ದ ಲೆಟರ್ ಹೆಡ್ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರದ್ದಾಗಿರದೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರದು ಎಂದು ಗೊತ್ತಾಗಿದೆ.

ತಪ್ಪು ಪತ್ರ ರವಾನೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಬಂಧಿಸಿದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಮ್ಮೆ ತಮ್ಮ ಹೆಸರಿನ ಲೆಟರ್ ಹೆಡ್ ನಲ್ಲಿ ಸಂಬಂಧಿಸಿದವರಿಗೆಲ್ಲ ಪತ್ರ ರವಾನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Donate Janashakthi Media

Leave a Reply

Your email address will not be published. Required fields are marked *