ಮುನಿಸಿಪಲ್ ಕಾರ್ಮಿಕರ ಸೇವೆ ಖಾಯಮಾತಿಗಾಗಿ ನಡೆಸುತ್ತಿರುವ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು: ಘನತೆಯಿಂದ ಬದುಕಲು ಬೇಕಾದ ವೇತನ, ಅತ್ಯಗತ್ಯವಾದ ಸುರಕ್ಷಾ ಸಲಕರಣೆಗಳು, ಕಾರ್ಮಿಕರ ಕಾನೂನುಗಳ ಅನ್ವಯ 8 ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ, ವಾರದ ರಜೆ, ಸಂದಾರ್ಭಿಕ ರಜೆ, ಗಳಿಕೆ ರಜೆ, ಸಂಬಳದ ಚೀಟಿ, ಗುರುತಿನ ಚೀಟಿ, ಪಿಎಫ್/ಇ.ಎಸ್.ಐ. ಪಾವತಿಗಳಲ್ಲಿ ವಂಚನೆ, ಕುಡಿಯುವ ನೀರು, ಶೌಚಾಲಯ ಇತ್ಯಾದಿಗಳ ಸೌಲಭ್ಯಗಳ ಕೊರತೆಯಿಂದಾಗಿ ಧಾರುಣ ಸ್ಥಿತಿಯಲ್ಲಿ ಬದುಕುತ್ತಿರುವ ಮುನಿಸಿಪಲ್‌ ಕಾರ್ಮಿಕರು ಇಂದಿನಿಂದ (ಜುಲೈ 1) ಮುಷ್ಕರಕ್ಕೆ ಮುಂದಾಗಿದೆ.

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ, ಮುನಿಸಿಪಲ್‌ ಕಾರ್ಮಿಕರ ಮುಷ್ಕರವನ್ನು ಬೆಂಬಲಿಸಲಿದೆ ಎಂದು ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಅವರು ಹೇಳಿಕೆಯನ್ನು ನೀಡಿದ್ದು, ಹತ್ತಾರು ವರ್ಷಗಳಿಂದ ನಗರ-ಪಟ್ಟಣಗಳಲ್ಲಿ ಜನತೆಗೆ ಮೂಲಭೂತ ನಾಗರಿಕ ಸೌಲಭ್ಯಗಳಾದ ಸ್ವಚ್ಚತೆ, ನೀರು ಸರಬರಾಜು, ಬೀದಿ ದೀಪಗಳ ನಿರ್ವಹಣೆಗಾಗಿ ದುಡಿಯುತ್ತಿರುವ ಮುನಿಸಿಪಲ್ ಕಾರ್ಮಿಕರು ತಮ್ಮ ಸೇವೆಗಳ ಖಾಯಂಮಾತಿಗೆ ನಡೆಸುತ್ತಿರುವ ನ್ಯಾಯಯುತ ಮುಷ್ಕರಕ್ಕೆ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತದೆ ಎಂದಿದ್ದಾರೆ.

ಇಂದು ತಂತ್ರಜ್ಞಾನದಲ್ಲಿ ಸಾಕಷ್ಟು ಮುನ್ನಡೆ ಸಾಧಿಸಿದ್ದರೂ ಸಹ ಕಳೆದ 10 ವರ್ಷಗಳಲ್ಲಿ ಮ್ಯಾನ್‌ಹೋಲ್ ಮತ್ತು ಮಲದ ಗುಂಡಿಗಳಲ್ಲಿ 80ಕ್ಕೂ ಹೆಚ್ಚು ಜನ ಪೌರಕಾರ್ಮಿಕರು ತಮ್ಮ ಅಮೂಲ್ಯವಾದ ಜೀವ ಕಳೆದುಕೊಂಡಿರುವುದು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹತ್ತಾರು ವರ್ಷಗಳಿಂದ ಸತತವಾಗಿ ಖಾಯಮಾತಿಗಾಗಿ ಹತ್ತಾರು ಸಂಘಟನೆಗಳು ಹೋರಾಟಗಳನ್ನು ಹಮ್ಮಿಕೊಂಡಿದೆ. ಈ ಸಂದರ್ಭದಲ್ಲೆಲ್ಲಾ ಸರ್ಕಾರ ಖಾಯಂ ಮಾಡುವ ಭರವಸೆ ಮಾತ್ರ ನೀಡುತ್ತದೆ ವಿನಃ, ತನ್ನ ಭರವಸೆಯನ್ನು ಈಡೇರಿಸುತ್ತಿಲ್ಲ.

ಬದಲಿಗೆ ನೇರ ನೇಮಕಾತಿ, ನೇರ ಪಾವತಿ ಎಂದು ಹಾದಿ ತಪ್ಪಿಸಲಾಗುತ್ತಿದೆ ಮತ್ತು ಕಾರ್ಮಿಕರ ಒಗ್ಗಟ್ಟನ್ನು ಒಡೆಯುಲು ಮುಂದಾಗಿದೆ. ಮುಷ್ಕರ ತೆರಳಿರುವ ಕಾರ್ಮಿಕರ ಐಕ್ಯತೆಯನ್ನು ಒಡೆಯಲು ಸರ್ಕಾರ 4500 ಜನ ಪೌರ ಕಾರ್ಮಿಕರ ಮಾತ್ರ ಖಾಯಂ ಮಾಡುವುದಾಗಿ ಹೇಳಿರುವ ಕ್ರಮ ಸರಿಯಾದ್ದುದಲ್ಲ ಎಂದು ಸಿಪಿಐ(ಎಂ) ಪಕ್ಷ ಖಂಡಿಸಿದೆ.

Donate Janashakthi Media

Leave a Reply

Your email address will not be published. Required fields are marked *