ಇನ್‌ಸ್ಟಾಗ್ರಾಮ್ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯ| ಮೂವರು ಅಪ್ರಾಪ್ತರು ವಶಕ್ಕೆ, ಓರ್ವನ ಬಂಧನ

ಬೆಳಗಾವಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾದ ಜಗಳವು ಅಪ್ರಾಪ್ತ ಬಾಲಕನ ಹತ್ಯೆಯಲ್ಲಿ ಕೊನೆಯಾಗಿರುವ ದುರಂತ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೆ-26 ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ-ಧಾರವಾಡಕ್ಕೂ ಹಬ್ಬಿದ ಹೋರಾಟದ ಕಿಚ್ಚು-ಅಗ್ನಿಪಥ ವಿರುದ್ಧ ಯುವಕರ ಸಿಟ್ಟು

ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ. ಈ ಸಂಬಂಧ ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆಯಲಾಗಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 26 ರಂದು ಸಂಜೆ ಈ ಘಟನೆ ನಡೆದಿದೆ. ಮೃತ ಸುಂಕದ ಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಹುಡುಗಿಯ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಂಕದ ಅವರಿಗೆ ಸಂದೇಶ ಕಳುಹಿಸುತ್ತಿದ್ದರು.

ಇದನ್ನೂ ಓದಿ:ಬೆಳಗಾವಿ: ರಸ್ತೆ ಅಪಘಾತದಿಂದ ಎಎಸ್‌ಐ ಕುಟುಂಬ ಸೇರಿ ನಾಲ್ವರು ಮರಣ

ಈ ವಿಷಯ ತಿಳಿದ ಸಂತ್ರಸ್ತ ಆರೋಪಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿಗಳು ಗುಂಪುಗೂಡಿ ಸುಂಕದ ಜತೆ ಜಗಳವಾಡಿದ್ದಾರೆ. ಬಳಿಕ ಸುಂಕದ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸುಂಕದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

ವಿಡಿಯೋ ನೋಡಿ:ಖಾಲಿ ಹುದ್ದೆಗಳಿಗೆ ನಿವೃತ್ತಿ ಹೊಂದಿದವರೇ ಮರು ನೇಮಕವಾದರೆ ಯುವಕರ ಗತಿ ಏನು? ಎಂ.ಎನ್‌ ವೇಣುಗೋಪಾಲ್‌ ಜೊತೆ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *