ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಎಂಯುಟಿಎಸ್‌ ಸಹಾಯಕ್ ಪರಿಚಯ

ಬೆಂಗಳೂರು: ರೈಲಿನಲ್ಲಿ ಎಲ್ಲಿಗಾದರೂ ಪ್ರಯಾಣ ಮಾಡಬೇಕಿದ್ದರೆ ಟಿಕೆಟ್ ಖರೀದಿಗೆ ಸರದಿ ನಿಲ್ಲಬೇಕು. ಆದರೆ ಇದೀಗ ನೈಋತ್ಯ ರೈಲ್ವೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ Mobile unreserved ticketing system (MUTS) ಸಹಾಯಕ್ ಪರಿಚಯ ಮಾಡಿದೆ.

ಇದರಿಂದ, ಇನ್ಮುಂದೆ ಕೆಎಸ್ಆರ್ ರೈಲ್ವೆ ನಿಲ್ದಾಣ ಪ್ರವೇಶಿಸುತ್ತಿದ್ದಂತೆಯೇ ಪ್ರಯಾಣಿಕರು ಇರುವ ಸ್ಥಳಕ್ಕೆ ಬಂದು ಟಿಕೆಟ್ ಮಷಿನ್​ಗಳ ಮೂಲಕ ರೈಲ್ವೆ ಸಿಬ್ಬಂದಿ ಟಿಕೆಟ್ ನೀಡಲಿದ್ದಾರೆ.

ದೇಶದ 5 ರೈಲ್ವೆ ನಿಲ್ದಾಣಗಳಲ್ಲಿ MUTS ಸಹಾಯಕ್ ಪರಿಚಯಿಸಲು ಚಿಂತನೆ

ದೇಶದಲ್ಲಿ ಐದು ರೈಲ್ವೆ ಸ್ಟೇಷನ್​ಳಲ್ಲಿ ಈ ವ್ಯವಸ್ಥೆ ಜಾರಿ ಮಾಡಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಂಡಿದ್ದು, ಪ್ರಾಯೋಗಿಕವಾಗಿ ಮೊದಲಿಗೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಪರಿಚಯ ಮಾಡಲಾಗಿದೆ.

ಇದನ್ನೂ ಓದಿ: ಚಿತ್ರಮಂದಿರಗಳ ವ್ಯವಸ್ಥೆಯನ್ನು ಸರಿಪಡಿಸಬೇಕು: ಸುಪ್ರೀಂ ಕೋರ್ಟ್‌

ವೀಕೆಂಡ್ ಅಥವಾ ಹಬ್ಬಗಳ ಸಂದರ್ಭದಲ್ಲಿ ಕೆಎಸ್ಎಆರ್ ರೈಲ್ವೆ ನಿಲ್ದಾಣಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರಯಾಣಿಕರು ಬರುತ್ತಾರೆ. ಜನರ ದಟ್ಟಣೆ‌ ನಿಯಂತ್ರಣಕ್ಕಾಗಿ ಈ MUTS ಸಹಾಯಕ್ ಆರಂಭಿಸಲಾಗಿದ್ದು, ಇದರಿಂದ ಪ್ರಯಾಣಿಕರು ಗಂಟೆಗಟ್ಟಲೇ ಸರದಿಯಲ್ಲಿ ನಿಲ್ಲುವ ಅನಿವಾರ್ಯತೆ ತಪ್ಪಲಿದೆ.

MUTS ಸಹಾಯಕ್​ನಲ್ಲಿ ಟಿಕೆಟ್ ಖರೀದಿಸಿದರೆ ಶೇ 3 ರ ಡಿಸ್ಕೌಂಟ್

MUTS ಸಹಾಯಕ್​ ಮೂಲಕ ಟಿಕೆಟ್ ಖರೀದಿ ಮಾಡಿದರೆ ಶೇ 3 ರಷ್ಟು ರಿಯಾಯಿತಿ ಕೂಡ ದೊರೆಯಲಿದೆ. ಪ್ರತಿದಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಇದ್ದಲ್ಲಿಗೆ ಹೋಗಿ ಸಹಾಯಕ್​ಗಳು ಟಿಕೆಟ್ ಕೊಡಲಿವೆ. ಇದು ಯಶಸ್ವಿಯಾದರೆ ರಾಜ್ಯದ ಎಲ್ಲಾ ರೈಲ್ವೆ ನಿಲ್ದಾಣಗಳಿಗೆ ವಿಸ್ತರಿಸುವ ಗುರಿಯನ್ನು ನೈಋತ್ಯ ರೈಲ್ವೆ ಹಾಕಿಕೊಂಡಿದೆ. MUTS ಸಹಾಯಕ್ ಮೂಲಕ ಟಿಕೆಟ್ ಪಡೆದ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ‌.

ಒಟ್ಟಿನಲ್ಲಿ, ಈ MUTS ಸಹಾಯಕ್​ನಿಂದ ಪ್ರಯಾಣಿಕರು ಟಿಕೆಟ್ ಖರೀದಿಸಲು ಸರದಿ ಸಾಲಿನಲ್ಲಿ ನಿಲ್ಲುವುದು ತಪ್ಪುವುದರಲ್ಲಿ ಅನುಮಾನ ಇಲ್ಲ.

ಇದನ್ನೂ ನೋಡಿ: ನಿರಂಜನ ಶತಮಾನ | ನಿರಂಜನ ಆಧುನಿಕ ಮನಸ್ಸಿನ ಪ್ರಯೋಗಶೀಲ ಸಾಹಿತಿ – ಪ್ರೊ. ರಾಜೇಂದ್ರ ಚೆನ್ನಿ Janashakthi Media

Donate Janashakthi Media

Leave a Reply

Your email address will not be published. Required fields are marked *