ಮೈಸೂರು-ಕೊಡಗು ಕ್ಷೇತ್ರದಲ್ಲಿ ದೊಡ್ಡ ಅಂತರದ ಗೆಲುವು : ವಿಜಯೇಂದ್ರ

ಬೆಂಗಳೂರು: ಯದುವೀರ ಒಡೆಯರ್ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ವಿಶ್ವನಾಥನನ್ನು ಭೇಟಿ ಮಾಡಿದ ನಂತರ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿರಿಯರು ಮತ್ತು ವಿಧಾನಪರಿಷತ್ ಸದಸ್ಯರೂ ಆದ ವಿಶ್ವನಾಥ್ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ. ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥರಾದ ಯದುವೀರ ಒಡೆಯರ್ ಸಹ ಇದ್ದರು. ವಿಶ್ವನಾಥ್ ಯದುವೀರ ಒಡೆಯರ್ ಗೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಿದ್ದಾರೆ. ಯದುವೀರ ಒಡೆಯರ್ ಗೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ಕೊಡಬೇಕೆಂದು ಹೇಳಿದ್ದಾರೆ ಎಂದರು ಯದುವೀರ ಒಡೆಯರ್.

ಮಹಾರಾಜರ ಕಾಲದಲ್ಲಿ ದಲಿತ ಸಮುದಾಯಗಳು, ಪರಿಶಿಷ್ಟ ಜಾತಿ, ಪಂಗಡ ಸೇರಿ ಎಲ್ಲ ಸಮುದಾಯಗಳಿಗೂ ನ್ಯಾಯ ಕೊಟ್ಟಿದ್ದರು. ರಾಜವಂಶದ ಮನೆತನವು ಬಡವರಿಗೆ ಶಕ್ತಿಯನ್ನು ನೀಡಿದೆ. ಪಕ್ಷಾತೀತ ಬೆಂಬಲವನ್ನು ಅವರಿಗೆ ನೀಡಬೇಕೆಂದು ವಿಶ್ವನಾಥರವರು ಹೇಳಿದ್ದಾರೆ ಎಂದು ವಿವರಿಸಿದರು.

ಸುಮಲತಾ ಅವರ ನಿರ್ಧಾರವನ್ನು ನಿರೀಕ್ಷೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಸುಮಲತಾ ಅವರು ಪ್ರಧಾನಿ, ಅಮಿತ್ ಶಾ, ಜೆ.ಪಿ.ನಡ್ಡಾ ರನ್ನು ಭೇಟಿ ಮಾಡಿದ್ದರು. ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದು, ಎಚ್.ಡಿ.ಕುಮಾರಸ್ವಾಮಿ ಅಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಈ ನಡುವೆ ಸುಮಲತಾ ತೀರ್ಮಾನ ಸ್ವಾಗತಾರ್ಹ ಎಂದು ತಿಳಿಸಿದರು.

ಇದನ್ನೂ ಓದಿಬೋರ್ ವೆಲ್ ಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ರಕ್ಷಣೆ; ಇಂಡಿ ತಾಲೂಕು ಆಸ್ಪತ್ರೆಗೆ ದಾಖಲು

ಸಿಎಂ ಹೇಳಿಕೆ ಹಾಸ್ಯಾಸ್ಪದ..

ಮುಖ್ಯಮಂತ್ರಿಗಳು ಪದೇಪದೇ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನವೇ ಬಂದಿಲ್ಲ ಎಂಬ ಅವರ ಮಾತು ಅವರಿಗೆ ಶೋಭೆ ತರುವಂಥದ್ದಲ್ಲ. ಯುಪಿಎ ಸರಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ 10 ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಒಂದೂವರೆ ಲಕ್ಷ ಕೋಟಿ ಹಣವಷ್ಟೇ ಬಂದಿತ್ತು. ಪ್ರಧಾನಿ ಮೋದಿಜೀ ಅವರ 10 ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ 4 ಲಕ್ಷ ಕೋಟಿಗೂ ಹೆಚ್ಚು ಅನುದಾನ ಲಭಿಸಿದೆ. ಮೂಲಭೂತ ಸೌಕರ್ಯಗಳಿಗೆ ಒತ್ತು ಕೊಟ್ಟಿದ್ದಾರೆ. ಇದರ ನಡುವೆಯೂ ಸಹ ಮುಖ್ಯಮಂತ್ರಿಗಳ ಈ ಹೇಳಿಕೆ ಹಾಸ್ಯಾಸ್ಪದ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಬರಗಾಲದ ಸಂದರ್ಭದಲ್ಲಿ ಮೋದಿಜೀ ಅವರ ಮೇಲೆ ಮುಖ್ಯಮಂತ್ರಿಗಳು ಪದೇಪದೇ ಆರೋಪ ಮಾಡುತ್ತಿದ್ದಾರೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ರೈತರ ಕುರಿತು ನಿಮಗೆ ಕರುಣೆ ಬರಲಿಲ್ಲವೇಕೆ ಎಂದು ಪ್ರಶ್ನಿಸಿದರು. ರೈತರ ಬಗ್ಗೆ ಕಿಂಚಿತ್ತೂ ಅನುಕಂಪ ಬರಲಿಲ್ಲವೇ ಎಂದು ಕೇಳಿದರು. ಈ ಸರಕಾರ ರೈತರು ಮತ್ತು ಜನರಿಗೆ ಶಾಪವಾಗಿ ಪರಿವರ್ತನೆಗೊಂಡಿದೆ ಎಂದು ಆಕ್ಷೇಪಿಸಿದರು.

ರಾಜ್ಯದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈಗಲಾದರೂ ಎಚ್ಚತ್ತುಕೊಂಡು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸ್ಪಷ್ಟ ಬಹುಮತದ ನಿಮ್ಮದೇ ಸರಕಾರ ರಾಜ್ಯದಲ್ಲಿದೆ. ರೈತರಿಗೆ ಸಮರ್ಪಕ ನ್ಯಾಯ ಕೊಡಿ ಎಂದು ಕೈಮುಗಿದು ಮನವಿ ಮಾಡುವುದಾಗಿ ಹೇಳಿದರು.

 

Donate Janashakthi Media

Leave a Reply

Your email address will not be published. Required fields are marked *