ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೈಸೂರು ದಸಾರಾ ಮಹೋತ್ಸವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರ ಪ್ರಕಟಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ಖಚಿತಪಡಿಸಿದ್ದಾರೆ.

ದಸರಾ ಮಹೋತ್ಸವ ಸೆಪ್ಟೆಂಬರ್ 26ರ ಸೋಮವಾರದಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆದಿತ್ತು. ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ  ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಮರು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.

ದೇಶದ ಮೊದಲ ಪ್ರಜೆ ಕೈಯಿಂದ ಈ ಬಾರಿ ದಸರಾ ಉದ್ಘಾಟನೆಯಾಗುತ್ತದೆ ಎಂಬುದು ಬಹಳ ಖುಷಿ ನೀಡಿದೆ. ರಾಜ್ಯದಿಂದ ಎಲ್ಲರೂ ಪಾಲ್ಗೊಂಡಿರುತ್ತಾರೆ. ಮುಖ್ಯವಾಗಿ ದಸರಾ ಉದ್ಘಾಟನೆ ರಾಷ್ಟ್ರಪತಿ ಅವರಿಂದ ಆಗುತ್ತದೆ. ರಾಷ್ಟ್ರಪತಿಯವರು ದಸರಾ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಅಗತ್ಯ ಭದ್ರತೆ ಒದಗಿಸಲಾಗುತ್ತದೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *