ನಾಳೆಗೆ ಜಂಪ್ ಹೊಡೆದ ಕರ್ಫ್ಯೂ : ಸಿಎಂ, ಸುಧಾಕರ ನಡುವೆ ಮೂಡದ ಒಮ್ಮತ

ಬೆಂಗಳೂರು : ಬ್ರಿಟನ್​ನ ಹೊಸ ರೂಪಾಂತರದ  ವೈರಸ್​ ಆತಂಕದ ಹಿನ್ನಲೆಯಲ್ಲಿ  ರಾಜ್ಯದಲ್ಲಿ ಇಂದಿನಿಂದ ನೈಟ್​ ಕರ್ಫ್ಯೂ ಜಾರಿ ಮಾಡವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೊಷಣೆಯನ್ನು ಮಾಡಿದ್ದರು.  ಸರಕಾರದ ಈ  ನಡೆಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು.  ವರ್ಷಾಂತ್ಯದಲ್ಲಿ ಈ ರೀತಿ ಕರ್ಫ್ಯೂ ಜಾರಿ ಮಾಡುವುದರಿಂದ ಬಾರ್​ ಅಂಡ್​ ರೆಸ್ಟೋರೆಂಟ್​, ಓಲಾ, ಉಬರ್​ ಸೇರಿದಂತೆ  ಖಾಸಗಿ ಸಾರಿಗೆ ಸಂಚಾರಕ್ಕೆ  ತೊಂದರೆಯಾಗಲಿದೆ,  ಉದ್ಯಮಗಳಿಗೆ ನಷ್ಟವಾಗಲಿದೆ ಎಂಬ ವಿರೋಧ ಎಲ್ಲೆಡೆ ವ್ಯಕ್ತವಾಗಿತ್ತು. ಈ ನೈಟ್​ ಕರ್ಫ್ಯೂನಿಂದಾಗಿ ಕ್ರಿಸ್ಮಸ್​ ಮತ್ತು ಹೊಸ ವರ್ಷಾಚರಣೆ ಸಮಯದ ಅಧಿಕ ವಹಿವಾಟಿಗೆ ಹೊಡೆತ ಬೀಳಲಿದೆ. ಈ ಹಿನ್ನಲೆ ಈ ಕರ್ಫ್ಯೂ ಅವಧಿಯನ್ನು ಒಂದೂವರೆ ಗಂಟೆಗಳ ಕಾಲ ತಡವಾಗಿ ಹೇರುವಂತೆ ಬಾರ್​ ಅಂಡ್​ ರೆಸ್ಟೋರೆಂಟ್​ ಮಾಲೀಕರು ಸೇರಿದಂತೆ ಹಲವರು ಬೇಡಿಕೆ ಇರಿಸಿದ್ದರು. ಈ ಬೇಡಿಕೆ ಮನಗಂಡ ಸರ್ಕಾರ ಬದಲಾವಣೆ ನಡೆಸಿದೆ. ಅದರಂತೆ ಇಂದಿನಿಂದ ಬದಲು ನಾಳೆಯಿಂದ ಅಂದರೆ ಡಿ. 24ರಿಂದ ಜ. 1 ರವರೆಗೆ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 10ರ ಬದಲು ರಾತ್ರಿ 11 ರಿಂದ ಬೆಳಿಗ್ಗೆ 5ರವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

 

ಈ ಕುರಿತು ತಮ್ಮ ಟ್ವೀಟರ್​ನಲ್ಲಿ ಸ್ಪಷ್ಟಪಡಿಸಿರುವ ಸಿಎಂ ಬಿಎಸ್​ ಯಡಿಯೂರಪ್ಪ ಅವರು, ಇದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ ಅಂದರೆ ದಿನಾಂಕ 24ರಿಂದ ಜನವರಿ 1ರವರೆಗೆ ಜಾರಿ ಮಾಡಲಾಗಿದೆ. ರಾತ್ರ 10ರ ಬದಲಿಗೆ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದಿದ್ದಾರೆ. ಅಲ್ಲದೇ ಈ ನೈಟ್​ ಕರ್ಫ್ಯೂ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಡಿ. 24ರಂದು ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದೆ. ಈ ಸಂದರ್ಭದಲ್ಲಿ ಮಿಡ್​ನೈಟ್​ ಮಾಸ್​ಗೆ ಯಾವುದೇ ಅಡಚಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ನೈಟ್​ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗೆ ನಿರ್ಬಂಧ ವಿಧಿಸಲಾಗಿದೆ. ಬಸ್ಸು, ರೈಲು, ವಿಮಾನ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆಟೋ, ಟ್ಯಾಕ್ಸಿ, ಗಳಿಗೆ ಪಿಕಪ್- ಡ್ರಾಪ್ ಗಳಿಗೆ ಅನುಮತಿ ನೀಡಲಾಗಿದೆ.  ಗೂಡ್ಸ್ ವಾಹನ, ಖಾಲಿ ವಾಹನ ಗಳು, ಟ್ರಕ್ಸ್​ಗಳು ಸಂಚಾರ ಮಾಡಬಹುದು. ರಾತ್ರಿ ಪಾಳಿಯಲ್ಲಿ ಶೇಕಡಾ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕೆಲಸ ಮಾಡಿಸಬಹುದಾಗಿದ್ದು, ಇವರಿಗೆ ಐಡಿ ಕಾರ್ಡ್​ ಕಡ್ಡಾಯವಾಗಿ ನೀಡಬೇಕು. ದೂರದ ಪ್ರಯಾಣ ಮಾಡಲು ಯಾವುದೇ ನಿರ್ಬಂಧ ಇಲ್ಲ. ಅವರು ಎಂದಿನಂತೆ ಪ್ರಯಾಣ ಮಾಡಬಹುದು. ಇನ್ನುಳಿದಂತೆ ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೆ‌ ನಿರ್ಬಂಧವಿಧಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನೂ ಕರ್ಫ್ಯೂ ಬಗ್ಗೆ  ವೈಧ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವು ಒಮ್ಮತ  ಇರದೆ ಇದ್ದದ್ದಕ್ಕೆ ಇಂತಹ ಎಡವಟ್ಟು ಆಗಿದೆ. ಮುಂಜಾಗೃತೆ ವಹಿಸಿದ್ದರೆ ಸಾಕಿತ್ತು, ಕರ್ಪ್ಯೂ ನ ಅಗತ್ಯ ಇರಲಿಲ್ಲ ಎಂಬ ಮಾತುಗಳು ಬಿಜೆಪಿಯ ಯುವ ಮೋರ್ಚಾ ವಲಯದಲ್ಲೆ  ಕೇಳಿ ಬರುತ್ತಿದೆ.

Donate Janashakthi Media

Leave a Reply

Your email address will not be published. Required fields are marked *