ಅನ್ನದಾತರ ನೋವನ್ನು ಸರಕಾರ ಅರ್ಥಮಾಡಿಕೊಳ್ಳಬೇಕು – ಬಿಜೆಪಿ ಸಂಸದ ವರುಣ್ ಗಾಂಧಿ

ನವದೆಹಲಿ: ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಸುದೀರ್ಘ ಕಾಲದಿಂದ ಹೋರಾಟ ನಡೆಸುತ್ತಿರುವ ರೈತರ ಪರ ಬಿಜೆಪಿ ಸಂಸದ ವರುಣ್ ಗಾಂಧಿ ಬ್ಯಾಟ್ ಬೀಸಿದ್ದಾರೆ. ಟ್ವೀಟ್ ಒಂದನ್ನು ಮಾಡಿರುವ ವರುಣ್ ಗಾಂಧಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. “ರೈತರ ನೋವನ್ನು ಅರ್ಥಮಾಡಿಕೊಳ್ಳಬೇಕಿದೆ. ಅವರ ದೂರದೃಷ್ಟಿಯನ್ನು ಅರಿತು ಅವರೊಂದಿಗೆ ಕೆಲಸ ಮಾಡಬೇಕಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿಕೃಷಿಕಾಯ್ದೆ ವಿರುದ್ಧ ಪ್ರತಿಭಟನೆ ಮುಂದುವರಿಸಲು ರೈತರ ನಿರ್ಧಾರ

ಇಂದು ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಬೃಹತ್ ಸಭೆ ನಡೆಸಿ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಚಳವಳಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ. ಇದೇ ಹೊತ್ತಲ್ಲಿ ಪಿಲಿಭಿತ್​ ಸಂಸದ ವರುಣ್​ ಗಾಂಧಿ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ರೈತರ ಪರ ಪೋಸ್ಟ್ ಹಾಕಿದ್ದಾರೆ. ಕಿಸಾನ್​ ಮಹಾಪಂಚಾಯತ್​ನ್ನು ಸಮರ್ಥಿಸಿದ ಅವರು, ರೈತರೊಂದಿಗೆ ಗೌರವಯುತವಾಗಿ ಮತ್ತೊಮ್ಮೆ ಮಾತುಕತೆ ನಡೆಸಬೇಕು ಎಂದು ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದಾರೆ.

ರೈತರ ಇಂದಿನ ಸಭೆಯ ವಿಡಿಯೋ ಶೇರ್​ ಮಾಡಿಕೊಂಡ ವರುಣ್​ ಗಾಂಧಿ, ಇಂದು ಮುಜಾಫರ್​ನಗರದಲ್ಲಿ ಲಕ್ಷಾಂತರ ರೈತರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೂ ನಮ್ಮಂತೆಯೇ ಮಾಂಸ-ರಕ್ತ ಹೊಂದಿರುವ ಮನುಷ್ಯರು. ಅವರೊಂದಿಗೆ ನಾವು ಗೌರವಯುತವಾಗಿ ಮತ್ತೆ ಮಾತುಕತೆ ಪ್ರಾರಂಭಿಸಬೇಕಾದ ಅಗತ್ಯತೆ ಇದೆ. ರೈತರ ನೋವು, ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅವರ ತಳಮಟ್ಟದ ಸಮಸ್ಯೆಯನ್ನು ಅರಿಯಬೇಕು ಎಂದು ಹೇಳಿದ್ದಾರೆ.

ಚುನಾವಣಾ ಸಮಯದಲ್ಲೇ ವರುಣ್ ಗಾಂಧಿ ಈ ಹೇಳಿಕೆ ಬಿಜೆಪಿ ಪಾಠ ಎಂದು ಅನೇಕರು ಹೇಳುತ್ತಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ 8-9 ತಿಂಗಳಿಂದಲೂ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದು, ಕಾಯ್ದೆಗಳನ್ನು ವಾಪಸ್​ ಪಡೆಯಿರಿ ಎಂದು ಆಗ್ರಹಿಸುತ್ತಿದ್ದಾರೆ. ನಾಲ್ಕಾರು ಬಾರಿ ಭಾರತ್ ಬಂದ್ ನಡೆಸಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿದೆ.

Donate Janashakthi Media

Leave a Reply

Your email address will not be published. Required fields are marked *