ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಹುಬ್ಬಳ್ಳಿ : ಬರ್ಬರವಾಗಿ ಹತ್ಯೆಯಾದ ಕಾಲೇಜು ವಿದ್ಯಾರ್ಥಿ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ನೇಹಾ ತಂದೆ-ತಾಯಿಯಾದ ನಿರಂಜನ ಹಿರೇಮಠ ಹಾಗೂ ಗೀತಾ ಅವರಿಗೆ ಸಿಎಂ ಸಾಂತ್ವನ ಹೇಳಿದರು.

ಮಗಳ ಅಗಲಿಕೆಯ ದುಃಖದಲ್ಲಿದ್ದ ನಿರಂಜನ ಹಿರೇಮಠ ಕೈ ಹಿಡಿದು ಸಿದ್ದರಾಮಯ್ಯ ಸಂತೈಸಿದರು. ಈ ವೇಳೆ ಸಚಿವರಾದ ಸಂತೋಷ್‌ ಲಾಡ್, ಹೆಚ್.ಕೆ.ಪಾಟೀಲ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್. ಕೋನರೆಡ್ಡಿ ಸಿಎಂ ಜೊತೆ ಇದ್ದರು.

ನಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಇದೇ ವೇಳೆ ನೇಹಾ ತಂದೆ-ತಾಯಿ, ಸಿಎಂ ಬಳಿ ಕೈಮುಗಿದು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲಾಗಿದೆ. ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದರು. ಇದು ಅಮಾನವೀಯ ಕೃತ್ಯ. ಇದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ ಎಂದರು.

Donate Janashakthi Media

Leave a Reply

Your email address will not be published. Required fields are marked *