ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಹೊಸ ಕರೆನ್ಸಿ ನೋಟುಗಳ ಮುದ್ರಣವಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಕೋವಿಡ್-19 ಬಿಕ್ಕಟ್ಟಿನಿಂದಾಗಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹೊಸ ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾಪವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಕರೆನ್ಸಿ ನೋಟುಗಳ ಮುದ್ರಣದ ಬಗ್ಗೆ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಕೋವಿಡ್-19 ನಿಂದ ಉಂಟಾಗಿರುವ ಉದ್ಯೋಗ ನಷ್ಟವನ್ನು ತಪ್ಪಿಸಲು ಹಾಗೂ ಆರ್ಥಿಕತೆಗೆ ಚೇತರಿಕೆ ನೀಡಲು ಹೊಸ ಕರೆನ್ಸಿ ನೋಟುಗಳ ಮುದ್ರಣ ಮಾಡುವ ಬಗ್ಗೆ ಬಗ್ಗೆ ಹಲವು ಅರ್ಥಶಾಸ್ತ್ರಜ್ಞರು ಮತ್ತು ತಜ್ಞರು ಸಲಹೆ ನೀಡಿದ್ದರು.

ಇದನ್ನು ಓದಿ: ಕೋವಿಡ್‌ ಬಿಕ್ಕಟ್ಟು: ದೇಶದಲ್ಲಿ 23 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ

ಭಾರತದ 2020-2021ರ ಅವಧಿಯಲ್ಲಿ ನೈಜ ಜಿಡಿಪಿ ಶೇಕಡಾ 7.3 ರಷ್ಟು ಕುಸಿತ ಕಂಡಿರುವ ಅಂದಾಜಿದೆ ಎಂದು ಲೋಕಸಭೆಗೆ ಸಚಿವರು ಲಿಖಿತ ಉತ್ತರ ನೀಡಿದರು. ಈ ಕುಸಿತ ಸಾಂಕ್ರಾಮಿಕದ ಪರಿಣಾಮ ಹಾಗೂ ಸಾಂಕ್ರಾಮಿಕವನ್ನು ತಡೆಗಟ್ಟುವುದಕ್ಕೆ ಕೈಗೊಂಡ ಕ್ರಮಗಳನ್ನು ಸೂಚಿಸುತ್ತವೆ ಎಂದೂ ಸಚಿವರು ಹೇಳಿದ್ದಾರೆ.

“ಭಾರತದ ಆರ್ಥಿಕತೆ ಬಲಿಷ್ಠವಾಗಿದೆ. ಆತ್ಮ ನಿರ್ಭರ ಭಾರತ ಮಿಷನ್ 2020-21 ರ ಉತ್ತರಾರ್ಧದಲ್ಲಿ ಆರ್ಥಿಕತೆಯನ್ನು ಚೇತರಿಕೆಯ ಹಾದಿಯಲ್ಲಿಟ್ಟಿದೆ. ಕೋವಿಡ್‌ ಸಾಂಕ್ರಾಮಿಕ ತಡೆಯಲು 2020-21 ರ ಅವಧಿಯಲ್ಲಿ ಆರ್ಥಿಕ ಬೆಳವಣಿಗೆಗೆ ಪುನರುಜ್ಜೀವನ ನೀಡುವುದಕ್ಕಾಗಿ ಹಾಗೂ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಸರಕಾರ 29.87 ಲಕ್ಷ ಕೋಟಿಯ ಸಮಗ್ರ ಪ್ಯಾಕೇಜ್ ನ್ನು ಘೋಷಿಸಿತ್ತು ” ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ₹2,000 ಕರೆನ್ಸಿ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಈ ವರ್ಷದ ಮಾರ್ಚ್‌ನಲ್ಲಿ ಸರಕಾರ ಸಂಸತ್ತಿಗೆ ತಿಳಿಸಿತ್ತು. ʻʻ2019-20 ಮತ್ತು 2020-21ರ ಅವಧಿಯಲ್ಲಿ, ₹2000 ಮುಖಬೆಲೆಯ ನೋಟುಗಳ ಮುದ್ರಣವನ್ನು ಕೈಗೊಂಡಿದ್ದ ಎಂದು ಆಗ ಹಣಕಾಸು ಖಾತೆ ಸಚಿವಾಲಯದ ಪರವಾಗಿ ಸಚಿವ ಅನುರಾಗ್ ಠಾಕೂರ್ ಹೇಳಿದರು.

Donate Janashakthi Media

Leave a Reply

Your email address will not be published. Required fields are marked *