ನಿರ್ಮಾಪಕರಿಗೆ ಬೆದರಿಕೆ ಕರೆ: ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು: ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕ ಭರತ್ ವಿಷ್ಣುಕಾಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ನಟ ದರ್ಶನ್ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಿರ್ಮಾಪಕ ಭರತ್ ವಿಷ್ಣುಕಾಂತ್ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಎಂಬ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಧ್ರುವನ್ ಎಂಬುವರು ನಾಯಕ ನಟನಾಗಿ ನಟಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್ ಈ ಚಿತ್ರದ ಚಿತ್ರೀಕರಣವನ್ನು ತಡವಾಗಿ ಮಾಡುತ್ತಿರುವುದರಿಂದ ಬೇಸರಗೊಂಡ ಧ್ರುವನ್ ನಟ ದರ್ಶನ್ ಬಳಿ ಹೇಳಿಕೊಂಡಿದ್ದಾನೆ. ನಂತರ ಭರತ್‌ಗೆ ದರ್ಶನ್‌  ಫೋನ್‌ ಮಾಡಿದ್ದಾರೆ.

‘2020 ರಲ್ಲಿ ಧ್ರುವನ್ ನಾಯಕ ನಟನನ್ನಾಗಿಸಿಕೊಂಡು ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾ ಪ್ರಾರಂಭಿಸಿದೆ. ಕೆಲವು ದಿನಗಳ ಬಳಿಕ ದರ್ಶನ್ ಅವರು ಕರೆ ಮಾಡಿ ಬೇರೆ ಕತೆಯೊಂದನ್ನು ಸೂಚಿಸಿ ಆ ಕತೆಯನ್ನು ಸಿನಿಮಾ ಮಾಡುವಂತೆ ಹೇಳಿದರು. ದರ್ಶನ್ ಹಾಗೂ ನಟ ಧ್ರುವನ್ ಸೇರಿ ನಿರ್ದೇಶಕರನ್ನೂ ಬದಲಿಸಿದರು. ನಾನೂ ಸಹ ಒಪ್ಪಿಕೊಂಡೆ ಆದರೆ ಕಾರಣಾಂತರಗಳಿಂದ ಸಿನಿಮಾದ ಚಿತ್ರೀಕರಣ ತಡವಾಯಿತು’ ಎಂದಿದ್ದಾರೆ.

ಆಗ ನಾನು ಲಾಕ್‌ಡೌನ್ ಮುಗಿದ ಕೂಡಲೇ ಚಿತ್ರೀಕರಣ ಪ್ರಾರಂಭ ಮಾಡ್ತೀನಿ ಎಂದೆ. ನಂತರ ಒಂದು ಹತ್ತು ದಿನ ಶೂಟಿಂಗ್ ಸಹ ಮಾಡಿದೆ” ಎಂದಿದ್ದಾರೆ ಭರತ್.

ʻಆಗಸ್ಟ್ ತಿಂಗಳ ವೇಳೆಗೆ ನನಗೆ ಕರೆ ಮಾಡಿದ ದರ್ಶನ್, ಇವನ (ಧ್ರುವನ್) ಜೀವನ ನೀನು ಹಾಳು ಮಾಡುತ್ತಿದ್ದೀಯ. ನೀನು ಹೀಗೆ ಸಿನಿಮಾ ತಡ ಮಾಡಿದರೆ, ಅವನ ಕೆರಿಯರ್ ಅನ್ನು ಯಾರು ನೋಡ್ತಾರೆ. ನೀನು ಬರ್ತೀಯ? ಎಲ್ಲಾ ನೋಡ್ಕೊಂಡು ತಾನೇ ಮಾಡಬೇಕು. ಸಿನಿಮಾ ಪ್ರಾರಂಭ ಮಾಡಿದ ಮೇಲೆ ಅದನ್ನು ಮುಗಿಸಬೇಕು. ಇಲ್ಲ ಅಂದ್ರೆ ನೀನು ಇರಲ್ಲ. ಏನಾದ್ರೂ ಮಾಡಬೇಕು ಅಂದ್ರೆ ಹೇಳಿಬಿಟ್ಟೇ ನಾನು ಮಾಡೋದು.

ನೀನು ರೆಡಿ ಇರು. ಎಲ್ಲಾದರೂ ಕಂಡಾಗ ಏನಪ್ಪ ಅಂತ ಮಾತನಾಡೋ ಥರ ಇಟ್ಕೋ, ಇಲ್ಲ ಅಂದ್ರೆ ನೀನೇ ಕಾಣ್ದೇ ಇರೋ ಥರ ಮಾಡಿ ಬಿಡ್ತೀನಿ. ಇದನ್ನ ವಾರ್ನಿಂಗ್ ಅಂತ ಬೇಕಾದ್ರೂ ಅನ್ಕೊ’ ಅಂತ ದರ್ಶನ್ ಹೇಳಿದರು.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‌ಸಿಆರ್ ಮಾಡಿಕೊಳ್ಳಲಾಗಿದೆ. ದೂರಿನ ಸಂಬಂಧ ನಾಯಕ ನಟ ಧ್ರುವನ್, ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಸಿನಿಮಾದ ನಿರ್ದೇಶಕ ಆಂಥೊನಿ ಸಿನಿಮಾದ ಕ್ಯಾಮೆರಾಮನ್ ಅವರುಗಳು ಠಾಣೆಗೆ ಹೋಗಿ ಹೇಳಿಕೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *