ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿಗಳಿಲ್ಲ ಎಂದು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಇಂಡಿಯಾ ಒಕ್ಕೂಟಕ್ಕೆ ಗೆಲುವು ಎಂಬ ವಿಚಾರ ಮುನ್ನಲೆಗೆ ಬಂದಿರುವುದರಿಂದ ಕಾಂಗ್ರೆಸ್‌ನಿಂದ ಪಿಎಂ ಅಭ್ಯರ್ಥಿ ಇಲ್ಲ ಎಂಬ ವಿಪಕ್ಷದ ಆರೋಪಕ್ಕೂ ಈ ಬಗ್ಗೆ ಕೆಲವು ಸುದ್ದಿಗಳು,ಊಹಾಪೋಹಗಳು ಹರಿದಾಡುತ್ತಿದ್ದು,ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಉತ್ತರ ನೀಡಿದ್ದಾರೆ. ಪ್ರಧಾನಿ

ನಗರದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ತಾವು ಎಲ್ಲೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ : ಅಸಮರ್ಥ ಗೃಹ ಸಚಿವರನ್ನು ಕೂಡಲೇ ವಜಾ ಮಾಡಲು ಪಿ. ರಾಜೀವ್ ಆಗ್ರಹ

ಕರ್ನಾಟಕದಿಂದ ತಾವು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಪ್ರಧಾನಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನು ನೋಡಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹತ್ಯಾಕಾಂಡ ಗೊತ್ತಿದ್ದು ಬಿಜೆಪಿ ಯಾಕೆ ಟಿಕೆಟ್ ನೀಡಿತು? ವಿಡಿಯೋ ಹಂಚಿದವರಿಗೂ ಶಿಕ್ಷೆಯಾಗಲಿ

Donate Janashakthi Media

Leave a Reply

Your email address will not be published. Required fields are marked *