ಅಹಮದಾಬಾದ್: ನಗರದಲ್ಲಿ ಏರ್ ಇಂಡಿಯಾ-171 ವಿಮಾನ ಪತನ ಸಂಭವಿಸಿ ಕೆಲವು ದಿನಗಳಾದರೂ, ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಏರ್ ಇಂಡಿಯಾ ವಿಮಾನದಲ್ಲಿ 242 ಮಂದಿ ಪ್ರಯಾಣಿಸುತ್ತಿದ್ದರೂ, ಅಹಮದಾಬಾದ್ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾನೆ.
ಜೂನ್ 14 ಶನಿವಾರದಂದು ಕಾಲೇಜಿನ ಜೂನಿಯರ್ ವೈದ್ಯರ ಸಂಘದ ಅಧ್ಯಕ್ಷ ಡಾ. ಧವಲ್ ಗಮೇಟಿ ಮಾತನಾಡಿ 270 ಶವಗಳನ್ನು ಸಿವಿಲ್ ಆಸ್ಪತ್ರೆಗೆ ಸ್ವೀಕರಿಸಲಾಗಿದೆ ಎಂದು ಹೇಳಿದರು. ಇಲ್ಲಿಯವರೆಗೆ 272 ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ – ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆಯ. ಇತರ 18 ವ್ಯಕ್ತಿಗಳು ಯಾರು (272 – [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.
ಇದನ್ನೂ ಓದಿ: ಬೆಂಗಳೂರು| ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕನನ್ನು ಕೆಲಸದಿಂದ ತೆಗೆದುಹಾಕಿದ ಕಾಲೇಜು
ಡಿಎನ್ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್ಎ ಪರೀಕ್ಷೆಯ ಮೂಲಕ 80 ಸಂತ್ರಸ್ತರನ್ನು ಗುರುತಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ರೂಪಾನಿ ಅವರ ಗೌರವಾರ್ಥವಾಗಿ ಗುಜರಾತ್ ಸರ್ಕಾರ ಸೋಮವಾರ ರಾಜ್ಯ ಶೋಕಾಚರಣೆಯನ್ನು ಘೋಷಿಸಿತು.
ಏತನ್ಮಧ್ಯೆ, ಪ್ರಧಾನ ಕಾರ್ಯದರ್ಶಿ ಡಾ. ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ಪ್ರಧಾನಿ ಕಚೇರಿಯ ಉನ್ನತ ಮಟ್ಟದ ತಂಡವು ನಡೆಯುತ್ತಿರುವ ಪರಿಹಾರ ಮತ್ತು ತನಿಖಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಅಹಮದಾಬಾದ್ಗೆ ಆಗಮಿಸಿದೆ.
ಇದನ್ನೂ ನೋಡಿ: ಭಾರತದ ರಾಜಕೀಯ ಮತ್ತು ಹಣಕಾಸು ಒಕ್ಕೂಟ ಸವಾಲುಗಳು ಮತ್ತು ಸಾಧ್ಯತೆಗಳು Janashakthi Media