4ಕ್ಕಿಂತ ಹೆಚ್ಚು ಮಕ್ಕಳಿರುವ ಕುಟಂಬಕ್ಕೆ ಸರ್ಕಾರದ ಸೌಲಭ್ಯವಿಲ್ಲ; ಮಣಿಪುರ ಸರ್ಕಾರ ಸುಗ್ರಿವಾಜ್ಞೆ

ಮಣಿಪುರ: ಜಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಚರ್ಚೆಗಳು ಜಾಲ್ತಿಯಲ್ಲಿರುವಾಗಲೇ ಇದೀಗ, ಮಣಿಪುರದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯ್ದಿಗೆ ಸುಗ್ರಿವಾಜ್ಞೆ ಮೂಲಕ ಅನುಮೋದನೆ ನೀಡಲಾಗಿದೆ. ಒಂದು ಕುಟಂಬ ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಲ್ಲಿ, ಆ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ ಹಾಗೂ ಪ್ರಯೋಜನಗಳು ಲಭ್ಯವಿಲ್ಲ ಎಂದು ಘೋಷಿಸಿದೆ.

ಮಣಿಪುರ ರಾಜ್ಯದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸುಗ್ರಿವಾಜ್ಞೆ ಹೊರಡಿಸುವ ಮೂಲಕ ಈ ಕಾಯ್ದೆಗೆ ಅನುಮೋದನೆ ನೀಡಿದೆ. ರಾಜ್ಯ ಜನಸಂಖ್ಯಾ ಆಯೋಗ ನೀಡಿರುವ ವರದಿ ಆಧರಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಆಯೋಗದ ಅಡಿಯಲ್ಲಿ ಈ ನೀತಿ ಜಾರಿಗೆ ಬಂದ ಬಳಿಕ ಯಾವುದೇ ದಂಪತಿ ನಾಲ್ಕು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ, ಆ ಕುಟುಂಬದ ಯಾವುದೇ ಸದಸ್ಯರಿಗೆ ಸರ್ಕಾರಿ ಸೌಲಭ್ಯಗಳು ಲಭಿಸುವುದಿಲ್ಲ.

ಜನಸಂಖ್ಯಾ ಅಸಮತೋಲನವನ್ನು ಹೋಗಲಾಡಿಸಲು ಹಾಗೂ ಭವಿಷ್ಯದಲ್ಲಿ ಎದುರಾಗುವ ಅಪಾಯ ತಪ್ಪಿಸಲು ಜನಸಂಖ್ಯಾ ನಿಯಂತ್ರಣ ಕಾನೂನು ಅತ್ಯವಶ್ಯಕ ಎಂದಿರುವ ಮಣಿಪುರ ಸರ್ಕಾರ 2001ರ ಜನಗಣತಿ ಹಾಗೂ 2011ರ ಜನಗಣತಿ ಅಂಕಿಸಂಖ್ಯೆಗಳನ್ನು ಉಲ್ಲೇಖಿಸಿದೆ.

ಅಲ್ಲದೆ, 1971 ರಿಂದ 2001ರ ವರೆಗೆ ಮಣಿಪುರದಲ್ಲಿ ಜನಸಂಖ್ಯಾ ಬೆಳವಣಿಗೆ ಶೇಕಡಾ 153.3. ಇನ್ನು 2001 ರಿಂದ 2011ರವರೆಗಿನ 10 ವರ್ಷಗಳ ಅವಧಿಯಲ್ಲಿ ಶೇಕಡಾ 250ಕ್ಕೆ ಏರಿಕೆ ಕಂಡಿದೆ. ಹೀಗೆ ಮುಂದುವರಿದೆರೆ ಮಣಿಪುರದಲ್ಲಿ ಜನಸಂಖ್ಯಾ ಅಸಮತೋಲನ ಹಾಗೂ ಹಲವು ಸಮಸ್ಯೆಗಳಿಗೆ ಕಾರಣವಾಗಲಿದೆ ಎಂದು ಮಣಿಪುರ ಬಿಜೆಪಿ ಶಾಸಕ ಕುಮುಕಚಾಮ್ ಜೋಯ್ಕಿಸಾನ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಸಂಬಂಧಿಸಿದಂದೆ ಚರ್ಚೆಗಳು ಮತ್ತೆ ಮುನ್ನಲೆಗೆ ಬಂದಿವೆ. ಭಾರತದಲ್ಲಿ ಒಂದು ಸಮುದಾಯದ ಜನಸಂಖ್ಯೆ ಹೆಚ್ಚಳದಿಂದ ಜನಸಂಖ್ಯಾ ಅಸಮತೋಲನ ಹೆಚ್ಚಾಗುತ್ತಿದೆ. ಇದರಿಂದ ಮತ್ತೆ ದೇಶ ಒಡೆದು ಹೋಗುವ ಆತಂಕವಿದೆ ಎಂದು ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಿದ್ದರು. ಈ ಭಾಷಣ ಭಾರಿ ಚರ್ಚೆಗೆ ಒಳಪಟ್ಟಿತ್ತು. ಪರ ವಿರೋಧಗಳು ಕೇಳಿಬಂದಿತ್ತು.

Donate Janashakthi Media

Leave a Reply

Your email address will not be published. Required fields are marked *