ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಕೆಲಸ ಮಾಡಬೇಕು:ಸಿಎಂ ಸಿದ್ದರಾಮಯ್ಯ

ಮೈಸೂರು: ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದ್ದಾರೆ.

ಆಗಸ್ಟ್-12‌ ರಂದು ಶನಿವಾರ  ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ರಾಜ್ಯ ವಕೀಲರ ಪರಿಷತ್‌ ಆಯೋಜಿಸಿದ್ದ 10ನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ:ಕೈ ಶಾಸಕರ ಸಿಟ್ಟು ತಣ್ಣಿಸಲು ಸಿಎಂ ಸಿದ್ದರಾಮಯ್ಯ ಇಂದು ಆರು ಜಿಲ್ಲೆಗಳ ಶಾಸಕರ ಸಭೆ

ಸಂವಿಧಾನಕ್ಕೆ ಬದ್ಧರಾಗಿ ಎಲ್ಲರೂ ನಡೆದುಕೊಳ್ಳಬೇಕು. ಸಂವಿಧಾನ ಜಾರಿಯಾದ್ದರಿಂದ ಎಲ್ಲರೂ ಸಮಾನರು. ಹಾಗಾಗಿ ಅಂತಹ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಎಲ್ಲರೂ ಮಾಡಬೇಕು ಎಂದರು.

ಈ ಹಿಂದೆ ರಾಜ ಪ್ರಭುತ್ವ ಇತ್ತು. ತಪ್ಪು ಮಾಡಿದರೆ ಶ್ರೀಮಂತರಿಗೆ ಒಂದು ಶಿಕ್ಷೆ ಬಡವರಿಗೆ ಒಂದು ಶಿಕ್ಷೆ ಎಂಬುದಿತ್ತು. ಆಗ ಜಾತಿ ವ್ಯವಸ್ಥೆ ಹೆಚ್ಚಿತ್ತು. ರಾಜ ಪ್ರಭುತ್ವದಲ್ಲಿ ಮನುವಾದ ಶಿಕ್ಷೆಯನ್ನು ತೀರ್ಮಾನ ಮಾಡುತ್ತಿತ್ತು. ಸಂವಿಧಾನ ಬಂದ ಮೇಲೆ ಪರಿಚ್ಛೇದ 14ರಡಿಯಲ್ಲಿ ಎಲ್ಲರಿಗೂ ಒಂದೇ ಕಾನೂನು ಜಾರಿಯಾಯಿತು. ಸಮಾಜ ಮತ್ತು ಕಾನೂನಿನಲ್ಲಿ ಯಾರು ಪೆದ್ದರೂ ಇಲ್ಲ. ಬುದ್ದಿವಂತರೂ ಇಲ್ಲ. ಅವಕಾಶ ಸಿಕ್ಕಿದವರು ಮೇಲೆ ಹೋಗುತ್ತಾರೆ. ನಾನು ವಕೀಲ ನಾಗಿದ್ದವನು. ನಮ್ಮಪ್ಪ ವಕೀಲ ವೃತ್ತಿ ಬೇಡ ಎಂದು ವಿರೋಧಿಸುತ್ತಿದ್ದ. ವಕೀಲನಾದ ಮೇಲೆ ನಾನು ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು.

ಅಂಬೇಡ್ಕರ್‌ ದಲಿತ ಸಮುದಾಯದಲ್ಲಿ ಹುಟ್ಟಿ ಹಲವಾರು ನೋವು ಸಂಕಟಗಳನ್ನು ಅನುಭವಿಸಿದರು. ಅವರಿ ಓದಿಗೆ ಬರೋಡ ಮಹರಾಜರು ಮತ್ತು ಶಾಹು ಮಹರಾಜರು ಸಹಾಯ ಮಾಡಿದರು. ಅವರ ಮೇದಾವಿನಿಂದ ಅವರು ಎಲ್ಲರೂ ಒಪ್ಪಿಕೊಳ್ಳುವ ಸಂವಿಧಾನ ನೀಡಿದರು. ಆ ಸಂವಿಧಾನ ಎಲ್ಲರನ್ನು ಒಳಗೊಂಡಿದೆ. ಅದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು. ವಕೀಲರಾದ ನೀವು ಬಡವರು,ಶಕ್ತಿ ಇಲ್ಲದವರ ಬಗ್ಗೆ ಸಿಂಪತಿ ತೋರಿ ಸಹಾಯ ಮಾಡುವ ಮನುಷ್ಯತ್ವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಅಸಮಾನತೆ ಇದೆ. ಹಾಗಾಗಿ ನೀವು ಅಸಮಾನತೆಯನ್ನು ತೊಡೆದುಹಾಕುವ ಕೆಲಸ ಮಾಡಬೇಕು ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *