ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್‌ಗೆ ನೋಟಿಸ್ ಜಾರಿ

ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡ (CBI) ದಳಪತಿ ವಿಜಯ್ ಜನವರಿ 12 ರಂದು ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ TVK ಅಧ್ಯಕ್ಷ ದಳಪತಿ ವಿಜಯ್ ಹಾಗೂ ಪಕ್ಷದ ಹಲವು ಪದಾಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೂಮಿ​ನಲ್ಲಿ ಬೆಂಕಿ; ಉಸಿರುಗಟ್ಟಿ ಅಕ್ಸೆಂಚರ್​ ಕಂಪನಿಯ ಮಹಿಳಾ ಟೆಕ್ಕಿ ಸಾವು

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವಿಜಯ್ ಅವರನ್ನು ಕರೆಯಿಸಿ ವಿಚಾರಣೆ ನಡೆಸಲು ಸಿಬಿಐ ನಿರ್ಧರಿಸಿದೆ. ನಂತರ ಈ ವಿಷಯದಲ್ಲಿ ಚಾರ್ಜ್ ಶೀಟ್ ಸಲ್ಲಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಸುಪ್ರೀಂ ಕೋರ್ಟ್ ಆದೇಶದ ನಂತರ ಸಿಬಿಐ, SIT ಯಿಂದ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರ್ ನಲ್ಲಿ ವಿಜಯ್ ಪಾಲ್ಗೊಂಡಿದ್ದ ರಾಜಕೀಯ ಸಭೆಯಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ತನಿಖಾ ಸಂಸ್ಥೆ ಸಂಗ್ರಹಿಸುತ್ತಿದೆ. ಘಟನೆಯಲ್ಲಿ 41 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇದನ್ನೂ ನೋಡಿ: ಬಿಗ್ ಡಿಬೇಟ್ : ಕೋಗಿಲು ಪ್ರಕರಣ | ವಾಸವಿದ್ದವರು ಯಾರು? ಹೊರ ರಾಜ್ಯದವರೇ? ಹೊರ ದೇಶದವರೇ?Janashakthi Media

Donate Janashakthi Media

Leave a Reply

Your email address will not be published. Required fields are marked *