ನೋಟುಗಳಲ್ಲಿ ಗಾಂಧೀಜಿ ಚಿತ್ರ ಬದಲಿಸುವ ಪ್ರಸ್ತಾವ ಇಲ್ಲ: ಆರ್‌ಬಿಐ ಸ್ಪಷ್ಟನೆ!

  • ಗಾಂಧೀ ಚಿತ್ರದ ಜೊತೆ ಎಪಿಜೆ ಮತ್ತು ಠಾಗೋರ್‌ ಅವರ ಚಿತ್ರಚಲಾವಣೆಗೆ ಬರುವುದು ಸುಳ್ಳು
  • ಚಲಾವಣೆಯಲ್ಲಿರುವ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ಹೊಸದಿಲ್ಲಿ: ಭಾರತೀಯ ಕರೆನ್ಸಿ ನೋಟುಗಳಿಂದ ಮಹಾತ್ಮಾ ಗಾಂಧಿಜೀ ಅವರ ಭಾವಚಿತ್ರ ತೆಗೆದು, ನೊಬೆಲ್ ಶಾಂತಿ ಪುರಸ್ಕೃತ ಕವಿ ರವೀಂದ್ರನಾಥ ಟ್ಯಾಗೋರ್ ಭಾವಚಿತ್ರ ಸೇರಿಸುವ ಯಾವುದೇ ಇರಾದೆ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಸ್ಪಷ್ಟಪಡಿಸಿದೆ.

ಚಲಾವಣೆಯಲ್ಲಿರುವ ಕರೆನ್ಸಿ ನೋಟುಗಳಲ್ಲಿರುವ ಗಾಂಧಿಜೀ ಭಾವಚಿತ್ರವನ್ನು ತೆಗೆಯಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅಲ್ಲದೇ ಗಾಂಧಿಜೀ ಬದಲಾಗಿ ರವೀಂದ್ರನಾಥ ಟ್ಯಾಗೋರ್ ಅವರ ಭಾವಚಿತ್ರವನ್ನು ಸೇರಿಸಲಾಗುತ್ತದೆ ಎಂದೂ ಹೇಳಲಾಗಿತ್ತು. ಜೊತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನೂ ಸೇರಿಸಲಾಗುತ್ತದೆ ಎನ್ನಲಾಗಿತ್ತು.

ಆದರೆ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ಅರ್‌ಬಿಐ, ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರಿಗೆ ಕರೆನ್ಸಿ ನೋಟುಗಳಲ್ಲಿ ಗೌರವದ ಸ್ಥಾನ ನೀಡಲಾಗಿದೆ. ಇದನ್ನು ಬದಲಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

Donate Janashakthi Media

Leave a Reply

Your email address will not be published. Required fields are marked *