ನ್ಯಾಯಾಲಯದತ್ತ ಯುವತಿ – ಕೋಲ್ಹಾಪುರದತ್ತ ರಮೇಶ್‌ ಜಾರಕಿಹೊಳಿ!!

ಬೆಂಗಳೂರು : ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ರಮೇಶ್ ಜಾರಕಿಹೊಳಿ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯದತ್ತ ಪ್ರಯಾಣ ಬೆಳೆಸಿದ್ದಾಗಿ ತಿಳಿದು ಬಂದಿದೆ.

ಮಹಾಲಕ್ಷ್ಮಿಗೆ ಪೂಜೆ ಮಾಡಿಸಲು ಸಮಯ ಕೇಳಿದ್ದ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, CD ಕೇಸ್‌ನಿಂದ ಕಂಗೆಟ್ಟಿದ್ದಾರೆ. ಹೀಗಾಗಿ ದೇವರ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಕಂಗೆಟ್ಟಿದ್ದ, ರಮೇಶ್ ಜಾರಕಿಹೊಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಮನೆಯಿಂದ ತೆರಳಿದ್ದರು. ಗೋಕಾಕ್‌ನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದರು. ಗೋಕಾಕ್ ಫಾಲ್ಸ್ ರಸ್ತೆಯಲ್ಲಿ ತೆರಳಿದ್ದರು. ನಿನ್ನೆ ರಾತ್ರಿ ಗೋಕಾಕ್‌ಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ ಬೆಳಗ್ಗೆಯಿಂದ ಮನೆಯಿಂದ ಹೊರಬಂದಿರಲಿಲ್ಲ. ಯುವತಿ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ. ಮಾಧ್ಯಮಗಳ ಕಣ್ತಪ್ಪಿಸಿ ಮನೆಯಿಂದ ತೆರಳಿದ್ದರು.

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಕೂಡಾ ರಮೇಶ್‌ ಜಾರಕಿಹೊಳಿ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದರು.

ರಮೇಶ್​ ಜಾರಕಿಹೊಳಿ ಕುರಿತು ಯುವತಿ ತನ್ನ ಮಹತ್ವದ ಹೇಳಿಕೆಯನ್ನು ದಾಖಲಿಸಿದ್ದಾಳೆ ಎನ್ನಲಾಗಿದೆ. ಸೆಕ್ಷನ್​ 164 ಪ್ರಕಾರ ಒಮ್ಮೆ ಸ್ಟೇಟ್ ಮೆಂಟ್ ನೀಡಿದ್ರೆ ಅದನ್ನು ಮತ್ತೆ ಬದಲಾಯಿಸಲು ಆಗೋದಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.  ಒಂದು ವೇಳೆ ಆಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಹೇಳಿಕೆ ದಾಖಲಿಸಿದರೆ, ಎಸ್​ಐಟಿ ಅಧಿಕಾರಿಗಳು ಸೆಕ್ಷನ್ 377 ಅತ್ಯಾಚಾರ ಪ್ರಕರಣ ದಾಖಲಿಸಿ ರಮೇಶ್​ ಜಾರಕಿಹೊಳಿ ಅವರನ್ನು ಬಂಧಿಸುವುದು ಅನಿವಾರ್ಯವಾಗುತ್ತದೆ.

Donate Janashakthi Media

Leave a Reply

Your email address will not be published. Required fields are marked *