ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೇ ಕೊಡ್ಬೇಕು, ಈ ವಿಷಯದಲ್ಲಿ ರಾಜಿ ಇಲ್ಲ| ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಅಸಮಾಧಾನ ಭುಗಿಲೆದ್ದಿದೆ. ಈ ಹೊತ್ತಿನಲ್ಲೇ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ವಿಪಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ಸಿಗಬೇಕು ಇದರಲ್ಲಿ ರಾಜಿ ಇಲ್ಲ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಅಧ್ಯಕ್ಷ ಹಾಗೂ ವಿಪಕ್ಷ ನಾಯಕ‌ ಸ್ಥಾನ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ. ಈ ವಿಚಾರವಾಗಿ ಇಂದು ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ಮನೆಗೆ ಆಗಮಿಸಿ ಮಾತನಾಡಿದ್ದಾರೆ.

ಇದನ್ನೂ ಓದಿ:ವಿಪಕ್ಷ ನಾಯಕನಿಲ್ಲದ ಅಧಿವೇಶನ – ಕಗ್ಗಂಟು ಬಿಚ್ಚಲಾಗದ ಬಿಜೆಪಿ

ಮಾತುಕತೆಯ ನಂತರ ಮಾತನಾಡಿತ ಯತ್ನಾಳ್, ದಕ್ಷಿಣ ಕರ್ನಾಟಕದವರೇ ಆಗಬೇಕಾ? ಮಂಗಳೂರು ಬಿಟ್ಟರೆ ದಕ್ಷಿಣ ಕರ್ನಾಟಕದ ಎಷ್ಟು ಶಾಸಕರು ಇದ್ದಾರೆ? ಬಹಳಷ್ಟು ಶಾಸಕರು ನಮ್ಮ ಜೊತೆ ಇದ್ದಾರೆ ಆದರೆ ಅವರಿಗೆ ಮಾತಾಡಲು ಧಮ್ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಸಮಸ್ಯೆ ಬಗ್ಗೆ ವೀಕ್ಷಕರಿಗೆ ಹೇಳಿದ್ದೇನೆ. ಅವರಿಗೆ ರಾಜ್ಯದ ಎಷ್ಟೊ ವಿಷಯ ಗೊತ್ತೇ ಇರಲಿಲ್ಲ.ನಾನು ಧೈರ್ಯದಿಂದ ಎಲ್ಲವನ್ನೂ ಹೇಳಿದ್ದೇನೆ. ನಾವು ಈ ದೇಶದಲ್ಲಿ ಉಳಿಯಬೇಕಾದರೆ ಮೋದಿ ಮತ್ತೆ ಪ್ರಧಾನಿ ಆಗಬೇಕು. ವರಿಷ್ಠರು ಕೆಲವೇ ಚೇಲಾಗಳ ಮಾತು ಕೇಳಿ ನಿರ್ಧಾರ ತೆಗೆದುಕೊಳ್ಳಬಾರದು, ಕೆಲವರು ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನ ಮಾಡುತ್ತಾರೆ, ನಾನು ಅಂಜಲ್ಲ ಎಂದು ಹೇಳಿದ್ದೇನೆ. ನೀವು ಧೈರ್ಯದಿಂದ ಹೇಳಿದ್ದೀರಿ ಇದನ್ನು ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ವಿಡಿಯೋ ನೋಡಿ:ಕಾಸಿಗಾಗಿ ಹುದ್ದೆ ಪ್ರಕರಣ : ಸಿಎಂ ಕಚೇರಿಯಲ್ಲಿ ಏನು ನಡೆಯುತ್ತಿದೆ – ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ

Donate Janashakthi Media

Leave a Reply

Your email address will not be published. Required fields are marked *