ಒಂದು ವರ್ಷದಲ್ಲಿ ಕಡಿದು ಗುಡ್ಡೆ ಹಾಕಿದ್ದೇನು?

-ಆಪರೇಷನ್ ಕಮಲಕ್ಕೆ‌ ಒಳಗಾದವರಿಗೆ ಕಾಂಗ್ರೆಸ್ ಪ್ರಶ್ನೆ

 

ಬೆಂಗಳೂರು: ಅಭಿವೃದ್ಧಿಗಾಗಿ ಬಿಜೆಪಿ ಸೇರುತ್ತಿದ್ದೇವೆ ಎಂದು ಬಿಜೆಪಿಗೆ ಹೋಗಿ ಸಚಿವರಾದವರು ಕಳೆದ ಒಂದು ವರ್ಷದಿಂದ ಕಡಿದು ಗುಡ್ಡೆ ಹಾಕಿದ್ದೇನು ಎಂದು ಆಪರೇಷನ್‌ ಕಮಲಕ್ಕೆ ಒಳಗಾಗಿ ಬಿಎಸ್‌ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದವರಿಗೆ ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಆಪರೇಷನ್ ಕಮಲಕ್ಕೆ ಒಳಗಾದವರು, ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇವೆಂದು ಹೇಳಿಕೊಂಡವರು, ನಿದ್ರಾವಸ್ಥೆಯಲ್ಲಿರುವ ಸರ್ಕಾರದಲ್ಲಿ ಮಂತ್ರಿಗಳಾಗಿದ್ದಾರೆ. ಒಂದು ವರ್ಷದಿಂದ ಕಡಿದು ಗುಡ್ಡೆ ಹಾಕಿದ್ದೇನು? ಎಂದು ಪ್ರಶ್ನಿಸಿದೆ.


ಆಪರೇಷನ್‌ ಕಮಲಕ್ಕೆ ಒಳಗಾಗಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವವ ಹೆಸರನ್ನು ಉಲ್ಲೇಖ ಮಾಡದೆ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಕಿಡಿಕಾರಿದೆ. ಕೋವಿಡ್‌ ನಿರ್ವಹಣೆ, ಪ್ರವಾಹ ಪರಿಹಾರ ವಿಚಾರವಾಗಿ ಆಡಳಿತ ಪಕ್ಷವನ್ನು ಟೀಕೆ ಮಾಡುತ್ತಾ ಬಂದಿರುವ ಕಾಂಗ್ರೆಸ್ ಇದೀಗ ಆಪರೇಷನ್‌ಗೆ ಒಳಗಾದವರನ್ನು ಪ್ರಶ್ನಿಸಿದೆ.

ಬಿಜೆಪಿ ಕರ್ನಾಟಕಕ್ಕೆ ಮೋಸ ಮಾಡಿದೆ ಎಂಬ ಹ್ಯಾಶ್ ಟ್ಯಾಗ್‌ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇನ್ನು ಸದನದಲ್ಲೂ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದು ವಿವಾದಿತ ಸುಗ್ರೀವಾಜ್ಞೆಗಳು ಹಾಗೂ ಮಸೂದಿಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಸಜ್ಜಾಗುತ್ತಿದೆ.

Donate Janashakthi Media

Leave a Reply

Your email address will not be published. Required fields are marked *