ವಿಜಯಪುರ| ಈರುಳ್ಳಿ ದರ ಭಾರಿ ಕುಸಿತ; ರೈತರು ಪ್ರತಿಭಟನೆ

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ರೈತರು ಈರುಳ್ಳಿ ದರ ತೀವ್ರ ಕುಸಿತ ಹಿನ್ನೆಲೆ ಈರುಳ್ಳಿ ರಾಶಿ ಸುರಿದು ಪ್ರತಿಭಟನೆ ಮಾಡಿದ್ದಾರೆ. ವಿಜಯಪುರ

ಕುಪಕಡ್ಡಿ ಬಳಿಯ ತೋಟಗಾರಿಕೆ ಎಫ್​​ಪಿಒ (ಫಾರ್ಮರ್ಸ್ ಪ್ರೊಡ್ಯೂಸರ್ ಆರ್ಗನೈಜೇಷನ್) ಆವರಣದಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ ಮಾಡಲಾಗಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಾಲ್​​ಗೆ ಕೇವಲ 200 ರೂಪಾಯಿಗೆ ಹರಾಜಾಗುತ್ತಿದೆ.

ಇದನ್ನೂ ಓದಿ: ಬ್ರೆಜಿಲ್‌| ತನಗೆ ತಾನೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ

ಕಡಿಮೆ ದರಕ್ಕೆ ಹರಾಜಾದ ಕಾರಣ ಈರುಳ್ಳಿ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ಬಿದ್ದು ಮಲ್ಲಿಕಾರ್ಜುನ ಬೋಲಗೊಂಡ ಎಂಬ ರೈತ ಹೊರಳಾಡಿದ್ದಾರೆ.

ಇದೇ ಈರುಳ್ಳಿ ಬಾಗಲಕೋಟೆಯಲ್ಲಿ ಕ್ವಿಂಟಾಲ್​ಗೆ 1000 ರೂಪಾಯಿಗೆ ಮಾರಾಟವಾಗಿತ್ತು. ಡಿಎಪಿ ರಸಗೊಬ್ಬರ 1200 ರೂ., ಯೂರಿಯಾ 300 ರೂ. ಇದೆ. ನಾವು ಕಷ್ಟಪಟ್ಟು ಬೆಳೆದ ಈರುಳ್ಳಿಗೆ ಕೇವಲ 200 ರೂ. ಯಾಕೆಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಕುರಿತು ಗಮನ ಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ: ‘ಬೂಕರ್‌’ ಅನುಭವವನ್ನು ಬಿಚ್ಚಿಟ್ಟ ಬಾನು ಮುಷ್ತಾಕ್ Janashakthi Media

Donate Janashakthi Media

Leave a Reply

Your email address will not be published. Required fields are marked *