ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – ಸಿಐಟಿಯು ತೀವ್ರ ಖಂಡನೆ

ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ ಕ್ರತ್ಯವಾಗಿದ್ದು, ಇದನ್ನು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್( CITU) ದ.ಕ.ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ ಸಿಐಟಿಯು (CITU) ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ತಿಳಿಸಿದರು .

ಮಾತ್ರವಲ್ಲದೆ ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಕೂಡಲೇ ವಾಪಸ್ ನೀಡಬೇಕು, ಧ್ವಂಸಗೊಳಿಸಿದ ವಸ್ತುಗಳಿಗೆ ಕೂಡಲೇ ಪರಿಹಾರ ನೀಡಬೇಕು, ಕಾನೂನುಬಾಹಿರ ಬುಲ್ಡೋಜರ್ ಧಾಳಿಯನ್ನು ತಕ್ಷಣ ನಿಲ್ಲಿಸಬೇಕು ,ಧಾಳಿಗೆ ಕಾರಣಕರ್ತರಾದ ಮೇಯರ್ ಕಮಿಷನರ್ ಇತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸದ್ದಾರೆ.

13 ವರ್ಷಗಳ ಹಿಂದೆ ಇದೇ ಬಿಜೆಪಿ ಆಡಳಿತ ಮಂಗಳೂರಿನಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಟೈಗರ್ ಕಾರ್ಯಾಚರಣೆ ನಡೆಸಿದರೆ, ಇಂದು‌ ಉತ್ತರಪ್ರದೇಶದ ಯೋಗಿ ಆಡಳಿತದ ಕುಖ್ಯಾತಿ ಮಾದರಿಯ ಬುಲ್ಡೋಜರ್ ಕಾರ್ಯಾಚರಣೆಯನ್ನು ಮಂಗಳೂರಿನ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ನಡೆಸಿರುವುದು ದೌರ್ಜನ್ಯದ ಪರಮಾವಧಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ : ವಯನಾಡ್‌ನಲ್ಲಿ ಭಾರೀ ಭೂಕುಸಿತ, 47ಕ್ಕೂ ಹೆಚ್ಚು ಜನ ಮೃತ

ಯಾವುದೇ ಮುನ್ಸೂಚನೆ ನೀಡದೆ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಧಾಳಿ ನಡೆಸಿ ತಾನು ಮಾಡಿದ ಮಹಾಪರಾಧವನ್ನು ಮುಚ್ಚಿಟ್ಟು, ಬೀದಿಬದಿ ವ್ಯಾಪಾರಸ್ಥರಿಂದ ಸಾರ್ವಜನಿಕರಿಗೆ ಭಾರೀ ತೊಂದರೆಯಾಗುತ್ತದೆ ಎಂಬ ಸುಳ್ಳನ್ನು ಬಿಚ್ಚಿಟ್ಟು ಮಂಗಳೂರಿನ ನಾಗರಿಕರನ್ನು ದಾರಿ ತಪ್ಪಿಸುತ್ತಿರುವ ಬಿಜೆಪಿ ಆಡಳಿತ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಲಿದೆ ಎಂದು ಎಚ್ಚರಿಸಿದರು.

ಕಳೆದ 13 ವರ್ಷಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಿಲ್ಲ, ಮುದ್ರಿಸಿದ ಗುರುತುಚೀಟಿಯನ್ನು ನೀಡಲಿಲ್ಲ,ಆಗಿಂದಾಗ್ಗೆ ಕರೆಯಬೇಕಾಗಿದ್ದ ಹಾಗೂ ಪ್ರತಿಯೊಂದನ್ನು ತೀರ್ಮಾನ ಮಾಡಬೇಕಾಗಿದ್ದ ಪಟ್ಟಣ ವ್ಯಾಪಾರ ಸಮಿತಿ (TVC)ಯ ಸಭೆಯನ್ನು ಕಳೆದ ಒಂದೂವರೆ ವರ್ಷದಲ್ಲಿ ಕರೆಯಲೇ ಇಲ್ಲ. ಇದ್ಯಾವುದನ್ನು ಮಾಡದೆ ಏಕಾಏಕಿಯಾಗಿ ಧಾಳಿ ನಡೆಸಿ, ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ ಹಕ್ಕುಗಳ ಸಂರಕ್ಷಣಾ ಕಾಯಿದೆಗೆ ವಿರುದ್ಧವಾಗಿ ನಡೆದುಕೊಂಡ ಮನಪಾದ ಬಿಜೆಪಿ ಆಡಳಿತದ ನಡೆ ಅತ್ಯಂತ ಕ್ರೂರವಾಗಿದೆ.

ಬೀದಿಬದಿ ವ್ಯಾಪಾರಸ್ಥರ ಮೇಲೆ ಮನಪಾ ಆಡಳಿತ ನಡೆಸುವ ದೌರ್ಜನ್ಯವನ್ನು ನಿಲ್ಲಿಸಲು ಕೂಡಲೇ ದ.ಕ.ಜಿಲ್ಲಾಡಳಿತ ಮಧ್ಯೆಪ್ರವೇಶಿಸಬೇಕು, ಧಾಳಿ ನಡೆಸಲು ಪ್ರಚೋದನೆ ನೀಡಿರುವ ಮೇಯರ್ ಕಮಿಷನರ್ ಇತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ವಶಪಡಿಸಿಕೊಂಡ ವಸ್ತುಗಳನ್ನು ವಾಪಸ್ ನೀಡಬೇಕು, ಧ್ವಂಸಗೊಳಿಸಿದ ವಸ್ತುಗಳಿಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದಲ್ಲಿ ತೀವ್ರ ರೀತಿಯ ಹೋರಾಟವನ್ನು ನಡೆಸಬೇಕಾದೀತು ಎಂದು ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಇದನ್ನು ನೋಡಿ : ಚೇಳೂರು : ಹಾಸ್ಟೆಲ್ ಸಂಖ್ಯೆ ಹೆಚ್ಚಿಸಿ – ವಿದ್ಯಾರ್ಥಿಗಳಿಂದ ಪತ್ರ ಚಳುವಳಿJanashakthi Media

Donate Janashakthi Media

Leave a Reply

Your email address will not be published. Required fields are marked *