ಆಪರೇಷನ್ ಕಾವೇರಿ : ಸುಡಾನ್​ನಿಂದ 362 ಕನ್ನಡಿಗರು ಬೆಂಗಳೂರಿಗೆ ಆಗಮನ

ಬೆಂಗಳೂರು: ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ.

362 ಕನ್ನಡಿಗರನ್ನು ಭಾರತೀಯ ಸೇನಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಈ ಪೈಕಿ 56 ಜನ ತಮಿಳಿಗರಿದ್ದಾರೆ. ಸದ್ಯ ಸ್ಕ್ರೀನಿಂಗ್​, ಕೊವಿಡ್ ಟೆಸ್ಟ್​ ಮಾಡಿ ವಿಳಾಸ ಪಡೆಯಲಾಗಿದೆ. ಸುರಕ್ಷಿತವಾಗಿ ಸುಡಾನ್​ನಿಂದ ಕರೆತಂದಿರುವ ಕನ್ನಡಿಗರನ್ನು ಸ್ವಾಗತಿಸಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಮತ್ತೊಂದು ಆಪರೇಷನ್ ಕಾವೇರಿ ವಿಮಾನದ ಮೂಲಕ 246 ಭಾರತೀಯರು ತಾಯ್ನಾಡಿನತ್ತ

ಸ್ವಗ್ರಾಮಗಳಿಗೆ ತೆರಳಲು ಕನ್ನಡಿಗರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಏರ್ಪೋಟ್​ನಿಂದ ಅವರು ತಮ್ಮ ಊರುಗಳಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೈಸೂರು ಸೇರಿದಂತೆ ಹಲವಡೆಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *