ಒತ್ತುವರಿ ತೆರವಿಗೆ ಹೋಗಿದ್ದ ಪಿಡಿಓ ಮೇಲೆ ಬಾಲಚಂದ್ರ ಜಾರಕಿಹೊಳಿ ಆಪ್ತನಿಂದ ಧಮ್ಕಿ

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕನಾಟ್ಟಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಕಂಪೌಂಡ್ ಒತ್ತುವರಿ ತೆರವು ಮಾಡಲು ಹೋಗಿದ್ದ ಪಿಡಿಓ ವೀರಭದ್ರ ಗುಂಡಿ ಮೇಲೆ ಹಲ್ಲೆ ನಡೆದಿದೆ.

ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಿದ್ದಪ್ಪ ಹಮ್ಮನವರ ಎಂಬಾತ  ಪಿಡಿಓಗೆ ಧಮ್ಕಿ ಹಾಕಿರುವ ಘಟನೆ ನಡೆದಿದ್ದು, ಹಲ್ಲೆ ಮಾಡಿ ಧಮ್ಕಿ ಹಾಕಿರುವವರ ಮೇಲೆ ಪಿಡಿಓ ವೀರಭದ್ರ ಗುಂಡಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದಾರೆ.

ಸಿದ್ದಪ್ಪ, ಯಮನಪ್ಪ, ವೆಂಕಪ್ಪ ವಿರುದ್ಧ ಹಲ್ಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆ ಹಿಡಿಯಲು ಮುಂದಾಗುತ್ತಿದ್ದಂತೆ ಮಹಿಳೆಯಿಂದ ಹೈಡ್ರಾಮಾವೊಂದು ನಡೆದಿದ್ದು, ತಾನೇ ಸೀರೆ ಹರಿದುಕೊಂಡು ನನ್ನನ್ನು ಪಿಡಿಓ ಎಳೆದಾಡಿದ್ದಾನೆ ಎಂದು  ಬಾಳವ್ವಾ ಹುಲಕುಂದ ಎಂಬ  ಮಹಿಳೆ ಆರೋಪಿಸಿದ್ದಾಳೆ.

ಮಹಿಳೆಯನ್ನು ಎಳೆದಾಡಿದ್ದೀಯಾ ಎಂದು ಕೇಸ್ ಕೊಡ್ತೇನಿ ಅಂತಾ ಬಾಲಚಂದ್ರ ಜಾರಕಿಹೊಳಿ ಆಪ್ತ ಸಿದ್ದಪ್ಪ ಪಿಡಿಓಗೆ ಧಮ್ಕಿ ಹಾಕಿದ್ದಾನೆ.

Donate Janashakthi Media

Leave a Reply

Your email address will not be published. Required fields are marked *