ತಿಂಗಳಿಗೆ ಕನಿಷ್ಠ ₹36,000 ವೇತನ ಪಾವತಿಗೆ ಹೊರಗುತ್ತಿಗೆ ನೌಕರರ ಸಂಘ ಆಗ್ರಹ

ಚಿತ್ರದುರ್ಗ: ತಿಂಗಳಿಗೆ ಕನಿಷ್ಠ ₹36,000 ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್‌ 8ರಂದು ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನಕಾರರು ಜಮಾಯಿಸಿದರು.

ಕೂಡಲೇ ಕನಿಷ್ಠ ವೇತನ ಜಾರಿಗೊಳಿಸಬೇಕು, ಬೀದರ್‌ ಮಾದರಿಯಲ್ಲಿ ಸಹಕಾರ ಸಂಘವನ್ನು ಚಿತ್ರದುರ್ಗದಲ್ಲಿ ಪ್ರಾರಂಭಿಸಬೇಕು. ಸೊಸೈಟಿ ಮೂಲಕ ವೇತನ ಪಾವತಿಸುವ ಮೂಲಕ ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ದೆಹಲಿ | ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ

ಕಾರ್ಮಿಕ ಇಲಾಖೆ ನಿಯಮದ ಪ್ರಕಾರ ವಾರದ ರಜೆ, ಇಎಸ್‌ಐ, ಪಿಎಫ್‌ ನೀಡಬೇಕು. ಬಿಸಿಎಂ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಹಿಂದಿನಂತೆ ರಾತ್ರಿ ಕಾವಲುಗಾರರನ್ನು ನೇಮಿಸಬೇಕು. ಸಿಬ್ಬಂದಿ ಕಡಿತದ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ಗೆ ಮನವಿ ಸಲ್ಲಿಸಿದರು. ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಹಿರಿಯ ಉಪಾಧ್ಯಕ್ಷ ಮರಡಿ ಜಂಬಯ್ಯ ನಾಯಕ, ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಯಶವಂತ ಕುಮಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್‌.ಪುನೀತ್‌ ಕುಮಾರ್‌ ಇದ್ದರು.

ಇದನ್ನೂ ನೋಡಿ: ಅಮೆರಿಕ ಮಣಿಸಿದ ಮಹಾನ್‌ ನಾಯಕ ಫಿಡೆಲ್‌ ಕ್ಯಾಸ್ಟ್ರೊ – ಕೆ.ಎಸ್.ರವಿಕುಮಾರ್Janashakthi Media

Donate Janashakthi Media

Leave a Reply

Your email address will not be published. Required fields are marked *