ಮದುವೆಗೆ ಪೋಷಕರಿಂದ ವಿರೋಧ – ನೇಣು ಬಿಗಿದುಕೊಂಡ ಯುವ ಪ್ರೇಮಿಗಳು

ಬಾಗಲಕೋಟೆ: ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಇದನ್ನೂ ಓದಿ : ನೂರು ಗ್ರಾಮ್ ಎಂದರೆ ಎಷ್ಟು ಪಪ್ಪಾ?

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧರಿಸಿದ್ದರು. ಆದರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು.

ಮದುವೆಗೆ ಮನೆಯಲ್ಲಿ ಒಪ್ಪಿಗೆ ದೊರೆಯಲಿಲ್ಲ ಎಂಬ ವಿಷಯವನ್ನು ಸಚಿನ್‌ ಪ್ರಿಯಾಳಿಗೆ ತಿಳಿಸಿದ್ದಾನೆ. ನಂತರ ನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *