ಆಕ್ಸಿಜನ್ ಕೊರತೆ ಚಾಮರಾಜನಗರದಲ್ಲಿ 24 ಮಂದಿ ಸಾವು

ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದುರಂತ ಸಂಭವಿಸಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ 18 ಬೆಳಗಿನ ಜಾವ 6ಕ್ಕೂ ಹೆಚ್ಚು ಜನ ಆಕ್ಸಿಜನ್ ಕೊರತೆಯಿಂದ ನಿಧನರಾಗಿರುವ ಶಂಕೆ ವ್ಯಕ್ತವಾಗಿದೆ. 24 ಮಂದಿ ಸಾವನ್ನಪ್ಪಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿದೆ ಎಂದು ರೋಗಿಗಳ ಸಂಬಂಧಿಕರ ಆರೋಪ ಮಾಡುತ್ತಿದ್ದರು,ಆಸ್ಪತ್ರೆ ಸಿಬ್ಬಂದಿ ಯ ನಿರ್ಲಕ್ಷ್ಯತೆ ಈ ಸಾವಿಗೆ ಕಾರಣವಿರಬಹುದು ಎನ್ನಲಾಗುತ್ತಿದೆ. ಕಳೆದ ಎರಡು ಮೂರು ವಾರದಿಂದ ಇದೇ ರೀತಿ ಈ ಆಸ್ಪತ್ರೆಯಲ್ಲಿ ಕಂಡು ಬರುತ್ತಿದೆ.

ಆಕ್ಸಿಜನ್ ಕೊರತೆಯಿಂದ ನನ್ನ ಅಣ್ಣ ಮೃತ ಪಟ್ಟಿದ್ದಾನೆ. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಅಧಿಕಾರಿಗಳನ್ನು ಕೇಳಿದ್ರೆ ಆಕ್ಸಿಜನ್ ವ್ಯವಸ್ಥೆಯಾಗಿದೆ ಎಂದು ತಿಳಿಸಿದ್ದರು. ನಾನೊಬ್ಬ ಜನ ಪ್ರತಿನಿಧಿಯಾಗಿ ನನ್ನ ಅಣ್ಣನನ್ನ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಾಮರಾಜನಗರ ಬಿಜೆಪಿ ಸದಸ್ಯ ಚಂದ್ರಶೇಖರ್ ಗಂಭೀರ ಆರೋಪ ಮಾಡಿದ್ದಾರೆ.ಜಿಲ್ಲಾಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Donate Janashakthi Media

Leave a Reply

Your email address will not be published. Required fields are marked *