ಪಡಿತರ ಅಕ್ಕಿ ಅಕ್ರಮ ಸಾಗಾಟ: 296 ಕ್ವಿಂಟಾಲ್‍ ಜಪ್ತಿ

ರಾಯಚೂರು: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಮುದಗಲ್ ಠಾಣೆ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಅಂಕಲಿಮಠ ಕ್ರಾಸ್ ಬಳಿ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 5.92 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. 296 ಕ್ವಿಂಟಾಲ್‍ನ 605 ಅಕ್ಕಿ ಮೂಟೆಗಳು ಜಪ್ತಿಯಾಗಿವೆ.

ಪಡಿತರದಾರರಿಂದಲೇ ಪಡಿತರ ಅಕ್ಕಿ ಖರೀದಿ ಮಾಡಿದ್ದ ಆರೋಪಿ ನಾಗೇಶ್ ವಿರೂಪಾಕ್ಷ ಗೌಡ, ಮಣಿಕಂಠ ಎಂಬುವವರಿಗೆ ಒಂದು ಲೋಡ್ ಮಾರಲು ಮುಂದಾಗಿದ್ದ. ಈ ವೇಳೆ ದಾಳಿ ನಡೆಸಿದ್ದ ಪೊಲೀಸರು ಪಡಿತರ ಅಕ್ಕಿ ದಂಧೆ ನಡೆಸುತ್ತಿದ್ದ ನಾಗೇಶ್‍ನನ್ನು ಸೆರೆ ಹಿಡಿದಿದ್ದಾರೆ. ಪೊಲೀಸರ ಮುಂದೆ ನಾಗೇಶ್ ತಪ್ಪೊಪ್ಪಿಕೊಂಡಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Donate Janashakthi Media

Leave a Reply

Your email address will not be published. Required fields are marked *