ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಾನಕ ಉಗ್ರ ದಾಳಿಯ ಬಳಿಕ, ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ದಾಳಿಯ ಕುರಿತ ವಿವರಗಳನ್ನು ಪಡೆದುಕೊಂಡರು .
ಇದನ್ನು ಓದಿ :-ವಿಭಜನಕಾರೀ ನಡೆಗಳನ್ನು ತಡೆಗಟ್ಟಬೇಕು – ಸಿಪಿಐ(ಎಂ) ಆಗ್ರಹ
ದಾಳಿಯ ಬಳಿಕ ಮಾತನಾಡಿದ ರಾಹುಲ್ ಗಾಂಧಿ, “ಈ ಉಗ್ರ ದಾಳಿ ಸಮಾಜವನ್ನು ವಿಭಜಿಸುವ ಉದ್ದೇಶದಿಂದ ನಡೆದ ಭಯಾನಕ ದುರಂತವಾಗಿದೆ. ಗಾಯಾಳುಗಳ ಆರೋಗ್ಯ ವಿಚಾರಿಸಲು ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾನು ಇಲ್ಲಿ ಬಂದಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ಜನರು ಹಾಗೂ ಇಡೀ ರಾಷ್ಟ್ರವು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ಸಮಯದಲ್ಲಿ ರಾಷ್ಟ್ರವನ್ನು ಸಂಪೂರ್ಣವಾಗಿ ಬೆಂಬಲಿಸಿದೆ” ಎಂದು ಹೇಳಿದರು .
ಅವರು ಮುಂದುವರೆದು, “ಉಗ್ರರ ವಿರುದ್ಧ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಮ್ಮ ಬೆಂಬಲವಿದೆ. ಸಮಾಜವನ್ನು ವಿಭಜಿಸುವುದೇ ಉಗ್ರರ ಈ ದಾಳಿಯ ಹಿಂದಿನ ಉದ್ದೇಶ. ಉಗ್ರರ ಈ ಪ್ಲ್ಯಾನ್ ವಿಫಲಗೊಳಿಸಲು ಪ್ರತಿಯೊಬ್ಬ ಭಾರತೀಯನೂ ಒಗ್ಗಟ್ಟಿನಿಂದಿರುವುದು ಬಹಳ ಮುಖ್ಯ” ಎಂದು ಹೇಳಿದರು .
ಇದನ್ನು ಓದಿ :-ನಿಶಿಕಾಂತ್ ದುಬೆ ಬೆದರಿಕೆ, ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಅಖಿಲ ಭಾರತ ವಕೀಲರ ಒಕ್ಕೂಟದಿಂದ ಪ್ರತಿಭಟನೆ
ಈ ಘಟನೆಯು ರಾಷ್ಟ್ರದ ಭದ್ರತೆ ಮತ್ತು ಒಗ್ಗಟ್ಟಿಗೆ ಎದುರಾಗಿ ನಿಂತಿರುವಾಗ, ರಾಹುಲ್ ಗಾಂಧಿಯ ಈ ಕ್ರಮವು ಉಗ್ರರ ವಿರುದ್ಧದ ಹೋರಾಟದಲ್ಲಿ ಎಲ್ಲರಿಗೂ ಸ್ಪಷ್ಟ ಸಂದೇಶವನ್ನು ನೀಡಿದೆ.