ಕೇಂದ್ರ ಸ್ಥಾನದಲ್ಲಿ ಇರದಿದ್ದಕ್ಕೆ ಪಿಡಿಒ ರವಿಕುಮಾರ ಎಚ್ ಅಮಾನತು

ಹಾವೇರಿ: ಜಿಲ್ಲೆಯ ಮೆಡ್ಲೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರವಿಕುಮಾರ ಎಚ್. ರನ್ನು ಕೇಂದ್ರ ಸ್ಥಾನದಲ್ಲಿ ಇರದಿದ್ದಕ್ಕೆ  ಸೇವೆಯಿಂದ ಅಮಾನತು ಮಾಡಲಾಗಿದೆ.

ರಾಹುತನಕಟ್ಟಿಯ ಕಾಯಂ ಪಿಡಿಒ ಆಗಿದ್ದ ರವಿಕುಮಾರ ರಿಗೆ, ಮೆಡ್ಲೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಹೊಣೆ ವಹಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ರುಚಿ ಬಿಂದಲ್ ಅವರು ಇತ್ತೀಚೆಗೆ ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: 2029 ಲೋಕಸಭಾ ಚುನಾವಣೆ: ಮಹಿಳೆಯರಿಗೆ 33% ಮೀಸಲು ಸಾದ್ಯತೆ

ಆದರೆ, ಅಲ್ಲಿ ಪಿಡಿಒ ಹಾಜರಿರಲಿಲ್ಲ. ರಾಹುತನಕಟ್ಟಿ ಗ್ರಾಮ ಪಂಚಾಯಿತಿಯಲ್ಲಿ ವಿಚಾರಿಸಿದಾಗ, ಅಲ್ಲಿಯೂ ಪಿಡಿಒ ಇರಲಿಲ್ಲ. ಕೇಂದ್ರ ಸ್ಥಾನದಲ್ಲಿರದೇ ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಪಿಡಿಒ ರವಿಕುಮಾರ ಅವರನ್ನು ಅಮಾನತುಗೊಳಿಸಿ ಸಿಇಒ ರುಚಿ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ನೋಡಿ: ‘ಬೂಕರ್‌’ ಅನುಭವವನ್ನು ಬಿಚ್ಚಿಟ್ಟ ಬಾನು ಮುಷ್ತಾಕ್ Janashakthi Media

Donate Janashakthi Media

Leave a Reply

Your email address will not be published. Required fields are marked *