ಡೆಂಗ್ಯೂಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಡೆಂಗ್ಯೂಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವುದು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆಸ್ಪತ್ರೆತಯಲ್ಲಿ ಕಂಡುಬಂದಿದೆ.

ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಮೃತಪಟ್ಟಿರುವುದು ವರದಿಯಾಗಿದೆ.

ಇದನ್ನು ಓದಿ : 400-ಪಾರ್‌ ಮಾಯವಾಗಿ 300-ಪಾರ್‌ ಹೇಗೆ ಬಂದಿತು? ವ್ಯಂಗ್ಯವಾಗಿ ಪ್ರಶ್ನಿಸಿದ ರಾಹುಲ್‌ ಗಾಂಧಿ

ಕಳೆದ ಕೆಲಸ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ನಾಗರಾಜ್, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಿಸದೇ ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಬಲಿಯಾಗಿದ್ದಾರೆ. ಅಲ್ಲದೇ ಸಕ್ಕರೆ ಕಾಯಿಲೆಯೂ ಕೂಡ ನಾಗರಾಜ್‌ರನ್ನು ಆವರಿಸಿತ್ತು.

ಬಿಳಿರಕ್ತ ಕಣಗಳು ಕುಂದಿದ ಕಾರಣ ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಡೆಂಗ್ಯೂನಿಂದ ಮೃತಪಟ್ಟಿರುವುದನ್ನುಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ದೃಢಪಡಿಸಿದ್ದಾರೆ.

ಇದನ್ನು ನೋಡಿ : ಹಿಂದಿ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ : ಸೀಟು ಮತಗಳಿಕೆ ಕುಸಿದ 5 ರಾಜ್ಯಗಳುJanashakthi Media

Donate Janashakthi Media

Leave a Reply

Your email address will not be published. Required fields are marked *