ಕೇರಳ ಸಿಎಂ ಪಿಣರಾಯಿ ವಿಜಯನ್ ಕೋವಿಡ್‌ನಿಂದ ಗುಣಮುಖ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಏಪ್ರಿಲ್‌ 8ರಂದು ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು.

ಆಸ್ಪತ್ರೆಗೆ ದಾಖಲಾದ ಏಳು ದಿನಗಳ ಬಳಿಕ ವಿಜಯನ್‌ ಅವರಿಗೆ ಕೋವಿಡ್‌ ನೆಗೆಟಿವ್‌ ವರದಿ ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಿಕೊಡಲಾಗಿದೆ ಎಂದು ವೈದ್ಯರು ತಿಳಿಸಿದರು.

ಮಾರ್ಚ್‌ 3 ರಂದು ಕೋಯಿಕ್ಕೋಡ್‌ ಜಿಲ್ಲಾಸ್ಪತ್ರೆಯಲ್ಲಿ ಪಿಣರಾಯಿ ವಿಜಯನ್‌ ಅವರು ಲಸಿಕೆ ಹಾಕಿಕೊಂಡಿದ್ದರು. ಆದರೆ, ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಏಪ್ರಿಲ್‌ 6 ರಂದು ಮತದಾನ ನಡೆದಿದ್ದು, ಫಲಿತಾಂಶ ಮೇ 2ರಂದು ಹೊರಬೀಳಲಿದೆ.

Donate Janashakthi Media

Leave a Reply

Your email address will not be published. Required fields are marked *