ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ : ಸಿಎಂ ಸಿದ್ದರಾಮಯ್ಯ

ಮೈಸೂರು: ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ಆಗಿದೆ.

ಮೈಸೂರಿನ ನರಸಿಂಹ ರಾಜ ಕ್ಷೇತ್ರದಲ್ಲಿರುವ ರಾಜೀವ್‌ ನಗರದ ಅಲ್ ಬಾದರ್ ವೃತ್ತವನ್ನು ಆಗಸ್ಟ್‌-31 ಗುರುವಾರ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಉದ್ಘಾಟನೆಗೂ ಮುನ್ನ ಸರ್ಕಾರದ ಗ್ಯಾರೆಂಟಿ ಯೋಜನೆಯ ಲೇಸರ್ ಶೋವನ್ನ ಕೂಡ ನಡೆಸಲಾಯಿತು, ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು, ಇನ್ನು ಇದೇ ವೇಳೆ ಮಾತನಾಡಿದ ಸಿಎಂ, ಈಗಲೇ ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸಿದ್ದಾರೆ ಎಂಬ ಅಭಿಪ್ರಾಯ ಈಗ ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇದೆ.

ಇದನ್ನೂ ಓದಿ:ಸಿದ್ದರಾಮಯ್ಯ ಅವರಿಗೆ ಭಯ ಕಾಡ್ತಿದೆ.. ಆ ಭಯ ಇರಬೇಕು : ಪ್ರತಾಪ್‌ ಸಿಂಹ ವ್ಯಂಗ್ಯ

ಇದಕ್ಕೆ ಪೂರಕ ಎಂಬಂತೆ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ʼ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮಗೆ ಬೆಂಬಲ ‌ನೀಡಿ, ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿ ಯನ್ನು ದೂರ ಇಡೀ, ಈಗ ಚುನಾವಣೆಗಾಗಿ ಗ್ಯಾಸ್ ದರ ಕಡಿಮೆ ಮಾಡಿದ್ದಾರೆ, ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿʼʼ ಎಂದು ಸಾರ್ವಜನಿಕರಲ್ಲಿ ಸಿಎಂ ಸಿದ್ದರಾಮಯ್ಯ ಕೈ ಮುಗಿದು ಮನವಿ ಮಾಡಿದ್ದಾರೆ.

ಇದೀಗ ಸಿಎಂ ಸಿದ್ದರಾಯ್ಯ ಅವರು ಜನರ ಬಳಿ ಮನವಿ ಮಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗ್ತಾ ಇದ್ದು, 2024ರ ಲೋಕಸಭೆ ಚುನಾವಣೆಗೆ ಸಿಎಂ ಈಗಲೇ ಪ್ರಚಾರವನ್ನ ಆರಂಭಿಸಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಇನ್ನೂ ಈ ಹಿಂದೆ ಕೊಡಗು-ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸಿಎಂ ಪುತ್ರ ಯತಿಂದ್ರ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು, ಇದಕ್ಕೆ ಪೂರಕವಾಗಿ ಇದೀಗ ಪ್ರತಾಪ್‌ ಸಿಂಹ ಅವರ ವಿರುದ್ಧ ನೇರವಾಗಿ ಕಿಡಿ ಕಾರೋದನ್ನ ನೋಡುತ್ತಿದ್ದರೆ ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತಿಂದ್ರ ಸಿದ್ದರಾಮಯ್ಯ ಕೊಡಗು-ಮೈಸೂರು ಲೋಕಸಭೆ ಚುನಾವಣೆಗೆ ನಿಲ್ಲುವ ಸಾಧ್ಯತೆಗಳನ್ನ ತಳ್ಳು ಹಾಕುವ ಸಾಧ್ಯತೆಗಳಿಲ್ಲ ಎನ್ನಲಾಗುತ್ತಿದೆ.

Donate Janashakthi Media

Leave a Reply

Your email address will not be published. Required fields are marked *