ಆಗಸ್ಟ್ 14: ‘ವಿಭಜನೆಯ ಕರಾಳ ನೆನಪಿನ ದಿನʼ ಆಚರಣೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಆಗಸ್ಟ್​ 14ರಂದು ದೇಶ ವಿಭಜನೆಯ ಕರಾಳ ನೆನಪಿನ ದಿನವಾಗಿ ಆಚರಿಸುವ ಅವಶ್ಯತೆಯಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ದೇಶದ ವಿಭಜನೆಯ ನೋವು ಎಂದಿಗೂ ಮರೆಯಲಾಗದು. ದ್ವೇಷ ಮತ್ತು ಹಿಂಸಾಚಾರದಿಂದ ನಮ್ಮ ಲಕ್ಷಾಂತರ ಸಹೋದರ ಸಹೋದರಿಯರು ಸ್ಥಳಾಂತರವಾದರು, ಅನೇಕರು ಪ್ರಾಣ ಕಳೆದುಕೊಂಡಿದ್ದರು. ನಮ್ಮ ಜನರು ಪಟ್ಟ ಪಾಡುಗಳು ಮತ್ತು ತ್ಯಾಗದ ನೆನಪಿಗಾಗಿ ಆಗಸ್ಟ್ 14ರಂದು ʻವಿಭಜನೆಯ ಕರಾಳ ದಿನವಾಗಿ ನೆನಪಿಸಿಕೊಳ್ಳುವ ಅವಶ್ಯಕತೆಯಿದೆ’ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂದಿಗ್ಧ ಕಾಲಘಟ್ಟದಲ್ಲಿ ಸ್ವಾತಂತ್ರ್ಯ ದಿನ

‘ವಿಭಜನೆಯ ಭಯಾನಕ ನೆನಪಿನ ದಿನ’ವು ಸಾಮಾಜಿಕ ವಿಭಜನೆ, ಅಸಾಮರಸ್ಯದ ವಿಷವನ್ನು ತೆಗೆದುಹಾಕುವ ಅಗತ್ಯವನ್ನು ನೆನಪಿಸುತ್ತದೆ. ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿಂದು ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದೆ. ಆಗಸ್ಟ್ 14ರ ದಿನವನ್ನು ದೇಶದ ಇತಿಹಾಸದಲ್ಲಿ ವಿಭಜನೆಯ ದುರಂತ ಕಂಡದಿನವಾಗಿದೆ. ಪಾಕಿಸ್ತಾನವನ್ನು 14 ಆಗಸ್ಟ್ 1947ರಂದು ಮತ್ತು ಭಾರತವನ್ನು 15 ಆಗಸ್ಟ್ 1947ರಂದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲಾಯಿತು. ಈ ವಿಭಜನೆಯ ಮೂಲಕ ಭಾರತವನ್ನು ಎರಡು ಭಾಗವಾಗಿ ಮಾಡಲಾಯಿತು. ಇದರೊಂದಿಗೆ ಬಂಗಾಳವನ್ನು ಕೂಡ ವಿಭಜನೆಗೊಂಡಿದ್ದವು. ಬಂಗಾಳದ ಪೂರ್ವ ಭಾಗವನ್ನು ಭಾರತದಿಂದ ಬೇರ್ಪಡಿಸಿ ಪೂರ್ವ ಪಾಕಿಸ್ತಾನವನ್ನು ರೂಪಿಸಲಾಯಿತು, ಅದು 1971 ರ ಯುದ್ಧದ ನಂತರ ಬಾಂಗ್ಲಾದೇಶವಾಯಿತು.

Donate Janashakthi Media

Leave a Reply

Your email address will not be published. Required fields are marked *