ಖ್ಯಾತ ತೆಲುಗು ನಟ ಅಲ್ಲುಅರ್ಜುನ್ ಮೇಲೆ ದೂರು ದಾಖಲು

ಹೈದರಾಬಾದ್ :ಜಾಹಿರಾತಿನ ಮೂಲಕ ಮಕ್ಕಳಿಗೆ ಹಾಗೂ ಪೋಷಕರಿಗೆ ತಪ್ಪಾದ ಮಾಹಿತಿ ರವಾನಿಸುತ್ತಿದ್ದಾರೆ ಎಂದು ತೆಲುಗು ನಟ ಅಲ್ಲುಅರ್ಜುನ್ ವಿರುದ್ಧ ತೆಲಂಗಾಣದ ಸಾಮಾಜಿಕ ಕಾರ್ಯಕರ್ತ ಕೋತ ಉಪೇಂದ್ರ ರೆಡ್ಡಿ ಅವರು ಇಲ್ಲಿನ ಅಂಬರ್‌ಪೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಯೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ, ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಚೈತನ್ಯ ಶೈಕ್ಷಣಿಕ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಅವರು ಸಂಸ್ಥೆಯಲ್ಲಿ ಅಗ್ರ ಶ್ರೇಣಿ ಪಡೆದವರ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಜಾಹೀರಾತಿನಲ್ಲಿ ಅಲ್ಲು ಅರ್ಜುನ್‌ ಅವರು ನೀಡಿರುವ ಅಂಕಿ ಅಂಶಗಳು ತಪ್ಪಾಗಿವೆ ಎಂದು ಉಪೇಂದ್ರ ರೆಡ್ಡಿ ಆರೋಪ ಮಾಡಿದ್ದಾರೆ

ಈ  ಬಗ್ಗೆ ನಟ  ಅಲ್ಲು ಅರ್ಜುನ್ ಯಾವುದೇ ಮಾಹಿತಿ ನೀಡಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಭಾರಿ ಚರ್ಚೆಯಾಗುತ್ತಿದೆ. ಕೆಲವರು ಅಲ್ಲು ಅರ್ಜುನ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ವಿವಾದಿತ ಜಾಹೀರಾತುಗಳಲ್ಲಿ ಅಭಿನಯಿಸುವುದು ಬೇಡ ಎಂದು ಕೆಲ ಅಭಿಮಾನಿಗಳು ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *