ಕತ್ತು ಕೊಯ್ದು ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಬೆಂಗಳೂರು :ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುತ್ತಿಗೆ ಸೀಳಿದ ರೀತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪ್ರಭುದ್ಯಾ

ಮೃತ ಯುವತಿ ಪ್ರಭುಧ್ಯಾ(21) ಆಗಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಆದರೆ, ಬುಧವಾರ ಸಂಜೆ ಏಕಾಏಕಿ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳ ಪರಿಶೀಲನೆ ಮಾಡಿದ ಪೊಲೀಸರು ಯುಡಿಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ನನ್ನ ಮಗಳು ತುಂಬಾ ಧೈರ್ಯವಂತೆ. ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಮನೆ ಹಿಂದಿನ ಡೋರ್ ತೆರೆದಿತ್ತು. ನನ್ನ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ. ಇಂದಿನ ಶೈಕ್ಷಣಿಕ ವ್ಯವಸ್ಥೆ ಸರಿಯಿಲ್ಲ ಎಂದು ಶೈಕ್ಷಿಣಿಕ ವ್ಯವಸ್ಥೆ ಬಗ್ಗೆ ಯಾವಗಾಲೂ ಪ್ರಶ್ನಿಸುತ್ತಿದ್ದಳು. ಇದೇ ಕಾರಣಕ್ಕೆ ಮಗಳನ್ನು ಹತ್ಯೆ ಮಡಲಾಗಿದೆ. ಮಗಳ ಸಾವಿಗೆ ನ್ಯಾಯ ಕೊಡಿ ಎಂದು ಹೋರಾಟಗಾರ್ತಿ ಹಾಗೂ ಮೃತ ಯುವತಿಯ ತಾಯಿ ಕೆ.ಆರ್.ಸೌಮ್ಯ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಭುದ್ಯಾ ತುಂಬಾ ಒಳ್ಳೆಯ ಹುಡುಗಿ. ಹೆಚ್ಚಾಗಿ ಓದುತ್ತಾ ಇದ್ದಳು, ಅಮ್ಮನನ್ನು ಚೆನ್ನಾಗಿ ನೋಡ್ಕೋಬೇಕು ಅಂತಿದ್ದಳು. ನಿನ್ನೆ ಸಂಜೆ ಸುಮಾರಿಗೆ ತಮ್ಮ ಬಂದು ಡೋರು ಬಡೆಯುತ್ತಿದ್ದ. ಈ ವೇಳೆ ಬಾಗಿಲು ತೆಗೆದು ನೋಡಿದಾಗ ಬಾತ್ ರೂಂನಲ್ಲಿ ಬಿದ್ದಿದ್ದಳು. ಕೂಡಲೇ ಆಸ್ಪತ್ರೆಗೆ ಕರ್ಕೊಂಡು ಹೋದ್ರೂ ಪ್ರಯೋಜನೆ ಆಗಲಿಲ್ಲ. ಪೊಲೀಸರು ಕೂಡ ಬಂದು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ರುಪ್ಸಾನಾ ಎಂಬ ಯುವತಿ,
ಹುಬ್ಬಳ್ಳಿಯಲ್ಲಿ ಕಾಲೇಜು ಓದುತ್ತಿದ್ದ ಇಬ್ಬರು ಯುವತಿಯರನ್ನು ಭೀಕರವಾಗಿ ಚಾಕು ಇರಿದು ಕೊಲೆ ಮಾಡಿದ ಘಟನೆ, ಕೊಡಗು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ್ದ ವಿದ್ಯಾರ್ಥಿನಿಯ ತಲೆಯನ್ನೇ ಕಡಿದು ಕ್ರೂರತ್ವ ಮೆರೆದ ಅಮಾನವೀಯ ಘಟನೆಗಳು ಇನ್ನೂ ನೆನಪಿನ ಪುಟದಿಂದ ಮಾಸದೇ ಹಸಿಯಾಗಿವೆ. ಹೀಗಿರುವಾಗ ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಯುವತಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾಳೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *