ಬೆಂಗಳೂರು | KMF ಚುನಾವಣೆಯಲ್ಲಿ ಸಿಎಂ-ಡಿಸಿಎಂ ನಡುವೆ ಪ್ರತಿಷ್ಠೆಯ ಪೈಪೋಟಿ

ಬೆಂಗಳೂರು: ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪಿಸುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ಪೈಪೋಟಿ ಜೋರಾಗಿದೆ.

ಬೆಂಗಳೂರು ಹಾಲು ಒಕ್ಕೂಟದ (ಬಮೂಲ್‌) ಅಧ್ಯಕ್ಷ ಡಿ.ಕೆ.ಸುರೇಶ್‌, ಬಳ್ಳಾರಿ, ಕೊಪ್ಪಳ– ರಾಯಚೂರು ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರು ಪ್ರಮುಖ ಆಕಾಂಕ್ಷಿಗಳು. ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಮೂವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.

ಇದನ್ನೂ ಓದಿ : ದಲಿತರ ಮೇಲೆ ದೌರ್ಜನ್ಯವೆಸಗಿದವರ ವಿರುದ್ದ ಕ್ರಮ: ಪ್ರತಿಭಟನೆ

ಹಿಂದಿನ ಅವಧಿಯಲ್ಲಿ ನಿಮ್ಮ ಬೆಂಬಲಿಗರಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ ಈ ಅವಧಿಗೆ ನಮ್ಮ ಕಡೆಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಸಹೋದರ ಡಿ.ಕೆ.ಸುರೇಶ್‌ ಅವರಿಗೆ ಕೆಎಂಎಫ್‌ ಚುಕ್ಕಾಣಿ ಕೊಡಿಸುವ ಇರಾದೆ ಶಿವಕುಮಾರ್‌ ಅವರದ್ದಾಗಿದೆ.

ಸೋಮವಾರ ಹಿಟ್ನಾಳ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಆಪ್ತ ರಾಘವೇಂದ್ರ ಹಿಟ್ನಾಳ ಪರ ಗಟ್ಟಿಯಾಗಿ ನಿಂತಿದ್ದಾರೆ. ಹಿಂದಿನ ಅವಧಿಯಲ್ಲಿ ಅವಕಾಶ ತಪ್ಪಿದ್ದರಿಂದ ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ನಂಜೇಗೌಡ ಅವರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ನೋಡಿ : “ವಿಕಸಿತ ಭಾರತ ಯಾರಿಗೆ? ಬ್ಯಾಂಕಿಂಗ್–ವಿಮಾ ವಲಯದಲ್ಲಿ ಜನಸಾಮಾನ್ಯರ ಹಿತ ಕಣ್ಮರೆಯೇ?” Janashakthi Media

Donate Janashakthi Media

Leave a Reply

Your email address will not be published. Required fields are marked *