ದಾಸ್ ಅವರ ನೇಮಕಾತಿ ಪ್ರಧಾನ ಮಂತ್ರಿಯ ಅವಧಿಯವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರಲಿದೆ ಎಂದು ಕ್ಯಾಬಿನೆಟ್ನ ನೇಮಕಾತಿ ಸಮಿತಿ ಹೇಳಿದೆ.
ಇದನ್ನೂ ಓದಿ:ಹೈದರಾಬಾದ್ನ ವೈದ್ಯ ವಿದ್ಯಾರ್ಥಿನಿ ದುರಂತ ಅಂತ್ಯ: ಮೂವತ್ತು ಗಂಟೆಗಳ ಬಳಿಕ ಶವ ಪತ್ತೆ
ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವರ ಅವಧಿಯನ್ನು ಸಹ ವಿಸ್ತರಿಸಲಾಗಿದೆ. 1987-ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಯನ್ನು 2023ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ನೀತಿ ಆಯೋಗ ಸಿಇಒ ಆಗಿ ನೇಮಿಸಲಾಗಿತ್ತು.
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಆರ್ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಭಾರತದ ಆರ್ಥಿಕ ಸ್ಥಿರತೆಯನ್ನು ಬಲಪಡಿಸಲು ಹಲವಾರು ಕ್ರಮಗಳ ಮುಂಚೂಣಿಯಲ್ಲಿದ್ದರು.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ – ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್
ಆರ್ಥಿಕತೆಯ ಮೇಲೆ ಸಾಂಕ್ರಾಮಿಕ ರೋಗದ ಪ್ರತಿಕೂಲ ಪರಿಣಾಮ ಹೆಚ್ಚು ಬೀಳದಂತೆ ನೋಡಿಕೊಳ್ಳುವಲ್ಲಿ ಸಫಲರಾಗಿದ್ದರು. ಹಣಕಾಸು ನೀತಿ, ನಿಯಂತ್ರಕ ನೀತಿ ಸೇರಿದಂತೆ ಹಲವಾರು ಕ್ರಮಗಳ ಮೂಲಕ ಆರ್ಬಿಐ ಅನ್ನು ಮುನ್ನಡೆಸಿದ್ದರು.