ಏಪ್ರಿಲ್ 8, 9 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮೈಸೂರು : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಬಿಜೆಪಿಯು ತನ್ನ ಸ್ಥಾನವನ್ನು ಭದ್ರಗೊಳಿಸುವ ಉದ್ದೇಶದಿಂದ ರಾಜ್ಯಕ್ಕೆ ರಾಷ್ಟ್ರ ನಾಯಕರುಗಳನ್ನು ಕರೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ  ಅವರು ಕಳೆದ ತಿಂಗಳಷ್ಟೇ ರಾಜ್ಯಕ್ಕೆ ಆಗಮಿಸಿದ್ದರು ಇದೀಗ ಮತ್ತೆ 
ಏಪ್ರಿಲ್ 8 ಮತ್ತು 9 ರಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯು ಸಹ ಬಿಜೆಪಿ ಪ್ರಾಯೋಜಿತ ರಾಜಕೀಯ ಕಾರ್ಯಕ್ರಮದ ಉದ್ದೇಶದಿಂದಲೇ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಅಂದು  ಸಂಜೆ 7:30 ಕ್ಕೆ ದೆಹಲಿಯಿಂದ ಮೈಸೂರಿಗೆ ರಾತ್ರಿ 8:30 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9 ರಂದು ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ 9: 30 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:30 ಕ್ಕೆ ಬಂಡೀಪುರದಿಂದ ತಮಿಳುನಾಡಿನ ನೀಲಗಿರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ. ನೀಲಗಿರಿಯಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿ,ಬಳಿಕ ಮೈಸೂರಿನ ಕೆಎಸ್‌ಒಯುನ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಬೆಳಗ್ಗೆ 11ಕ್ಕೆ ಆಗಮಿಸಿ ಘಟಿಕೋತ್ಸವ ಭವನದಲ್ಲಿ ನಡೆಯುವ ಬಂಡೀಪುರ ಹುಲಿ ಯೋಜನೆ 50ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆ ಎಸ್.ಜಿ.ಪಿ.ತಂಡದಿಂದ ತಪಾಸಣೆ ಮಾಡಲಾಗಿದೆ. ಮಧ್ಯಾಹ್ನ 12:30 ಕ್ಕೆ ಘಟಿಕೋತ್ಸವ ಭವನದಿಂದ ಮಂಡಕಳ್ಳಿ ವಿಮಾನ ನೀಲ್ದಾಣಕ್ಕೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ : ಮಂಡ್ಯ ರೋಡ್‌ ʼಶೋʼಕಿ ಆಯ್ತು, ಇದೀಗ ಮೆಟ್ರೊ ʼಶೋʼ ಗೆ ಮೋದಿ ಸಿದ್ದತೆ!

Donate Janashakthi Media

Leave a Reply

Your email address will not be published. Required fields are marked *