ಕೈದಿಯಿಂದ ಜೈಲಿನ ವಾರ್ಡನ್‌ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ : ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿರುವ ಘಟನೆ ರಾಜ್ಯದ ದೊಡ್ಡ ಕಾರಾಗೃಹಗಳಲ್ಲೊಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಂಭವಿಸಿದೆ.

ಮಾರಣಾಂತಿಕವಾಗಿ ಹಲ್ಲೆಗೊಳಾಗಾಗಿರುವ ಸಿಬ್ಬಂದಿ ಹಿಂಡಲಗಾ ಜೈಲಿನ ವಾರ್ಡನ್‌ ವಿನೋದ್‌ ಲೋಕಾಪುರ್ ಆಗಿದ್ದು, ಜೈಲಿನ ನಿಯಮ ಪಾಲನಾ ನಿಯಮ ಉಲ್ಲಂಘಿಸಿದ್ದಕ್ಕೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಜೈಲಿನ ನಿಯಮ ಪಾಲನೆ ಮಾಡು ಎಂದಿದ್ದಕ್ಕೆ  ರಾಹಿಲ್ ಅಲಿಯಾಸ್ ರೋಹನ್ ವಾರ್ಡನ್‌ ವಿನೋದ್‌ ಲೋಕಾಪುರ್‌ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ: ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ 80 ಲಕ್ಷ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

ಕಾರಾಗೃದಲ್ಲಿ ಎಲ್ಲರೂ ಒಂದೆ ಕಾನೂನು ಪಾಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಹಾಸನದಿಂದ ಗಡಿಪಾರಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರುವ ಕೈದಿ ರಾಹಿಲ್ ಅಲಿಯಾಸ್ ರೋಹನ್ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಜೈಲಿನ ಭದ್ರತೆ ವಿಭಾಗದಲ್ಲಿದ್ದ  ರೋಹನ್ ಆಸ್ಪತ್ರೆಗೆ ಹೋಗಲು ಸ್ಥಳೀಯ ಸಿಬ್ಬಂದಿ ಅನುಮತಿ ಬೇಕಾಗುತ್ತದೆ. ತಡವಾಗಿ ಅನುಮತಿ ನೀಡಿದರು ಎನ್ನುವ ಕಾರಣಕ್ಕೆ ಹೊರ ಬಂದು ವಿನೋದ್ ಮೇಲೆ ಹಲ್ಲೆ ಮಾಡಿ, ಕಾಲಿನಿಂದ ಒದ್ದು ಕೈಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾನೆ.

ತೀವ್ರವಾಗಿ ಗಾಯಗೊಂಡ ವಿನೋದ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಜೈಲಿನಲ್ಲಿ ಕೈದಿಗಳ ಗೂಂಡಾಗಿರಿಗೆ ಬೇಸತ್ತಿರುವ ಜೈಲಿನ‌ ಸಿಬ್ಬಂದಿ ಕೆಲಸಕ್ಕೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆಯೂ ಸಿಬ್ಬಂದಿ ಮೇಲೆ ಅನೇಕ ಬಾರಿ ಹಲ್ಲೆಯಾದರೂ ಕ್ರಮ ಆಗಿಲ್ಲ‌. ಮೇಲಾಧಿಕಾರಿಗಳು ಈಗಲಾದರೂ ಕ್ರಮ ಕೈಗೊಳ್ಳುವಂತೆ ಹಲ್ಲೆಗೊಳಗಾದ ಸಿಬ್ಬಂದಿ ವಿನೋದ್ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ಬಿಜೆಪಿ ಸೋತರೆ, ಮೋದಿ ಸುಲಭವಾಗಿ ಅಧಿಕಾರ ಬಿಟ್ಟುಕೊಡುವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *