ಇನ್ಮುಂದೆ 10 ನಿಮಿಷದೊಳಗೆ ಆಸ್ತಿ ನೋಂದಣಿ : ಸಚಿವ ಆರ್.ಅಶೋಕ್

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಏಳರಿಂದ ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾವೇರಿ 2.0ತಂತ್ರಾಂಶದ ಕುರಿತು ಮಾತನಾಡಿದ ಸಚಿವರು, ಈ ತಂತ್ರಾಂಶ ವಿನೂತನ, ನಾಗರೀಕ ಸ್ನೇಹಿಯಾಗಿದ್ದು, ಮಧ್ಯವರ್ತಿಗಳ ಹಾವಳಿ ಕಡಿಮೆ ಆಗಲಿದೆ. ಜೊತೆಗೆ ವರ್ಷದೊಳಗೆ ಕೈಯಲ್ಲಿ ಅರ್ಜಿ ಹಾಕುವುದನ್ನು ತಪ್ಪಿಸಿ, ಆನ್ ಲೈನ್ ಮಾಡುತ್ತೇವೆ. ಎಲ್ಲಾ ಜಿಲ್ಲೆಗಳಲ್ಲಿ ಮೂರು ತಿಂಗಳಲ್ಲಿ ಎಲ್ಲಾ ಕಡೆ ಪ್ರಾರಂಭವಾಗಲಿದೆ. ಆಸ್ತಿ, ವಿವಾಹ ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ರೀತಿಯ ನೋಂದಣಿಗಳು ಆನ್ ಲೈನ್ ಮಾಡಲಾಗುವುದು ಎಂದರು.

ಮೊದಲು ಬೆಳಗ್ಗೆಯಿಂದ ಸಂಜೆವರೆಗೂ ಕಾಯಬೇಕಿತ್ತು. ವಿದ್ಯಾವಂತರೂ ಕೂಡ ಅನೇಕ ದೂರು ನೀಡಿದ್ದರು. ಅದಕ್ಕೆ ಪರಿಹಾರ ಮಾಡಿದ್ದೇವೆ. ನೋಂದಣಿ ಮಾಡುವ ಮೊದಲು, ಮನೆಯಲ್ಲೇ ಕುಳಿತು ಡೀಡ್ ಅನ್ನು ಉಪನೋಂದಣಾಕಾರಿ ಕಚೇರಿಗೆ ಕಳಿಸಿದರೆ ಅದರಲ್ಲಿ ಉಪನೋಂದಣಾಧಿಕಾರಿ ತಪ್ಪಿದ್ದರೆ ತಿದ್ದಿ ಕಳುಹಿಸುತ್ತಾರೆ. ಬಳಿಕ ಎಲ್ಲವೂ ಸರಿಯಾಗಿದ್ದರೆ ನಿಗದಿತ ಹಣ ಕಟ್ಟಲು ಸೂಚನೆ ಸೂಚಿಸುತ್ತಾರೆ. ಎಲ್ಲವೂ ಸರಿಯಾದ ಬಳಿಕ ಸ್ಲಾಟ್ ಬುಕ್ ಮಾಡಲಾಗುವುದು. ಆ ಸಮಯದಲ್ಲಿ ಹೋಗಿ, ಮುಖ, ಸಹಿ, ಹೆಬ್ಬೆಟ್ಟು ಹಾಕಿ ನೋಂದಣಿ ಮಾಡಿಸಿಕೊಳ್ಳಬಹುದು. ಇದರಿಂದ ಡೇಟಾ ಎಂಟ್ರಿ ಕಡಿಮೆ ಆಗಲಿದೆ. ಅನ್ ಲೈನ್‍ಲ್ಲೇ ಇ.ಸಿ ಮತ್ತು ಪ್ರಮಾಣ ಪತ್ರ ಪಡೆಯಬಹುದು ಎಂದು ಹೇಳಿದರು.

ಕಾವೇರಿ ತಂತ್ರಜಾÐ 2 ಕ್ರಾಂತಿಕಾರಿ ಬದಲಾವಣೆ ತರುತ್ತಿದೆ. ಇದನ್ನು ಬೆಳಗಾವಿ ದಕ್ಷಿಣ, ಚಿಂಚೋಳಿಯಲ್ಲಿ ಪ್ರಾಯೋಗಿಕವಾಗಿ ಮಾಡಲಾಗಿದೆ. ಡಿ.ಡಿ ಮತ್ತು ಚಲನ್ ಹಿಂದೆ ಸ್ಕ್ಯಾಮ್ ಆಗಿತ್ತು. ಯಾರೊದ್ದೋ ಹೆಸರಿಗೆ ಡಿ.ಡಿ ಹೋಗುತ್ತಿತ್ತು. ಈಗ ಅವರ ಬ್ಯಾಂಕ್ ಅಕೌಂಟಿಂದ ನೇರವಾಗಿ ಇಲಾಖೆ ಖಾತೆಗೆ ವರ್ಗಾವಣೆ ಆಗಲಿದೆ. ಸರ್ವರ್ ಸಮಸ್ಯೆ ಕೂಡ ಇರೋದಿಲ್ಲ. ಉಪನೋಂದಣಾಕಾರಿ ಕಚೇರಿಯಲ್ಲಿ ಜನರ ಗುಂಪು ಕೂಡ ಇರೋದಿಲ್ಲ. ಅವರ ಸಮಯದಲ್ಲಿ ಬಂದು ಹೋಗಬಹುದು ಎಂದರು.
ಮದ್ಯವರ್ತಿಗಳ ಹಾವಳಿ ಇರೋದಿಲ್ಲ. ಕಾರ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಉಪನೋಂದಣಾಕಾರಿ ಇನ್ನು ಮುಂದೆ ಪಾಸ್ ಪೋರ್ಟ್‌ ಕಚೇರಿ ರೀತಿ ಕಾರ್ಯ ನಿರ್ವಹಿಸಲಿದೆ. ಲಿಫ್ಟ್, ವಿಕಲಚೇತನರ ರ್ಯಾಂಪ್ ಎಲ್ಲವೂ ಇರಲು ಸೂಚಿಸಲಾಗಿದೆ. ವಿವಿಧ ಕಚೇರಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ನೋಂದಣಿ ಬಗ್ಗೆ ವಿಧಾನಸಭೆ ಅವೇಶನ ಮಾಡುವಾಗ ಪ್ರತಿಬಾರಿ ದೂರು ಬರ್ತಿತ್ತು. ಬ್ಯಾಟರಿ ಇಲ್ಲ, ಸಮಸ್ಯೆ ಇದೆ ಎಂಬ ದೂರುಗಳಿದ್ದವು ಕಳೆದ 75 ವರ್ಷದಿಂದ ಯಾವುದೇ ಬದಲಾವಣೆ ಇರಲಿಲ್ಲ.
ನಮಗೆ 17 ಸಾವಿರ ಕೋಟಿ ರೂ. ಗುರಿ ನೀಡಲಾಗಿತ್ತು. ಅದಕ್ಕಿಂತ ಹೆಚ್ಚು ತಲುಪಿದ್ದೇವೆ. ಕಂದಾಯ ಕಟ್ಟಲು ರಿಯಾಯಿತಿ ನೀಡಿದೆವು. ಮುದ್ರಾಂಕ ಶುಲ್ಕದಲ್ಲೂ ರಿಯಾಯಿತಿ ನೀಡಲಾಗಿತ್ತು. ಮೊದಲು ಸಬ್ ರಿಜಿಸ್ಟ್ರರ್‌ ಕಚೇರಿಗೆ ಹೋಗಲು ಪಹಣಿ, ನಕಲಿನ ದಾಖಲೆ ನೀಡಿ ನೋಂದಣಿ ಮಾಡಿಸಲಾಗುತ್ತಿತ್ತು. ಈಗ ಸಬ್ ರಿಜಿಸ್ಟ್ರರ್‌ ಕಚೇರಿಯಲ್ಲೇ ಎಲ್ಲಾ ದಾಖಲೆಗಳು ಲಭ್ಯ ಇರಲಿದೆ. ಖಾತೆ, ಪಹಣಿ, ಸರ್ವೆ ನಂಬರ್ ಎಲ್ಲಾ ದಾಖಲೆ ಸಬ್ ರಿಜಿಸ್ಟ್ರೇಷನ್ ಕಚೇರಿಯಲ್ಲೇ ಇರಲಿದೆ. ನೋಂದಣಿ ಆದ ಬಳಿಕ ದಾಖಲೆಗಳು ಮಾಲೀಕರ ಡಿಜಿ ಲಾಕರ್ಗೆ ಹೋಗಲಿದೆ. ಸಹಿ ಮಾಡಿದ ದಾಖಲೆ ಡಿಜಿ ಲಾಕರ್ಗೆ ಹೋಗಲಿದೆ. ಮನೆಯಲ್ಲೇ ಕುಳಿತು ದಾಖಲೆ ಪಡೆಯಬಹುದು ಎಂದರು.

ಕಂದಾಯ ಇಲಾಖೆಯಲ್ಲಿ ಹಲವಾರು ಸುಧಾರಣೆ ತರಲಾಗಿದೆ. ಕಂದಾಯ ಇಲಾಖೆಯಲ್ಲಿ ಬದಲಾವಣೆ ಪರ್ವ ಮಾಡಲಾಗಿದೆ. 79ಎ, ಬಿ ತೆಗೆಯಲಾಗಿದ್ದು. ಮನೆ ಬಾಗಿಲಿಗೆ ಖಾತೆ ನೀಡುವುದು. ಕಾಫಿ ಬೆಳೆಗಾರರಿಗೆ ಕಂದಾಯ ಭೂಮಿ ಬಾಡಿಗೆ ನೀಡುವುದು. ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *