ರೈತ ವಿರೋಧಿ ಕೃಷಿ ಕಾಯ್ದೆ ಖಂಡಿಸಿ ಸಂಸತ್‌ ಭವನಕ್ಕೆ ಟ್ರ್ಯಾಕ್ಟರ್ ನಲ್ಲಿ ಬಂದ ರಾಹುಲ್ ಗಾಂಧಿ

ನವದೆಹಲಿ: ಕೇಂದ್ರ ಬಿಜೆಪಿ ಸರಕಾರವು ತರಲು ಹೊರಟಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲವಾಗಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್‌ ಭವನದವರೆಗೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಆಗಮಿಸುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ, ಪಕ್ಷದ ಕೆಲವು ನಾಯಕರನ್ನು ಕೂರಿಸಿಕೊಂಡು ದಿಲ್ಲಿಯ ಮುಖ್ಯ ರಸ್ತೆಗಳಲ್ಲಿ ಕೆಂಪು ಬಣ್ಣದ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಆಗಮಿಸಿದರು. ‘ನಾನು ರೈತರ ಸಂದೇಶವನ್ನು ಸಂಸತ್‌ಗೆ ತೆಗೆದುಕೊಂಡು ಬಂದಿದ್ದೇನೆ. ಸರಕಾರವು ರೈತರ ಧ್ವನಿಗಳನ್ನು ಹತ್ತಿಕ್ಕುತ್ತಿದ್ದಾರೆ ಮತ್ತು ಸಂಸತ್‌ನಲ್ಲಿ ಚರ್ಚೆ ನಡೆಸಲು ಅವಕಾಶ ನೀಡುತ್ತಿಲ್ಲ. ಅವರು ಈ ಕರಾಳ ಕಾನೂನುಗಳನ್ನು ರದ್ದುಗೊಳಿಸಬೇಕು. ಈ ಕಾನೂನುಗಳು ದೇಶದ ಕೆಲವೇ ಕೆಲವು ಶ್ರೀಮಂತ ಉದ್ಯಮಿಗಳಿಗೆ ಮಾತ್ರ ಅನುಕೂಲ ಎಂಬುದು ಇಡೀ ದೇಶದ ಜನತೆ ಅರಿತುಕೊಂಡಿದ್ದಾರೆ. ಕೂಡಲೇ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು.

ಇದನ್ನು ಓದಿ: ಕೃಷಿ ಕಾಯ್ದೆ ರದ್ದತಿಗಾಗಿ ಜಂತರ್ ಮಂತರ್ ಎದುರು ರೈತರ ಪ್ರತಿಭಟನೆ

ಸರಕಾರ ಹೇಳುವಂತೆ ರೈತರು ಬಹಳ ಸಂತೋಷದಿಂದ ಇದ್ದಾರೆ, ಆದರೆ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಕೂಡಲೇ ನೂತನ ಕೃಷಿ ಕಾನೂನುಗಳನ್ನು ಹಿಂಪಡೆದುಕೊಳ್ಳಬೇಕು. ಈ ಕಾನೂನುಗಳು ರೈತರನ್ನು ಕತ್ತಲೆಗೆ ತಳ್ಳಲಿವೆ. ಈ ಸರ್ಕಾರ ಪ್ರತಿಭಟನಾ ನಿರತ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಅವಮಾನನಿಸಿದೆ. ಆದರೆ ವಾಸ್ತವದಲ್ಲಿ ರೈತರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದರು.

ಸಂಸತ್ ಅಧಿವೇಶನ ಹಿನ್ನೆಲೆ ದೆಹಲಿಯ ಜಂತರ್-ಮಂತರ್ ಬಳಿಯಲ್ಲಿ ಪ್ರತಿನಿತ್ಯ 200 ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಂತರ್ ಮಂತರ್ ನಲ್ಲಿ ಅಧಿವೇಶನ ಮುಗಿಯವರೆಗೂ ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಕಳೆದ ಒಂದು ವರ್ಷದಿಂದ ಕೃಷಿ ಕಾನೂನು ವಿರೋಧಿಸಿ ರೈತರು 2020 ರ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.  ಗಡಿ ಭಾಗಗಳಾದ ಸಿಂಘು, ಟಿಕ್ರಿ, ಗಾಜೀಪುರದಲ್ಲಿ ರೈತರು ಪ್ರತಿಭಟನೆ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

Donate Janashakthi Media

Leave a Reply

Your email address will not be published. Required fields are marked *